ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಂ ಮುರಿಗೆಪ್ಪ ಅವರ ‘ಅಹಿಂಸಾ ಪ್ರತಿಪಾದಕ ಹುತಾತ್ಮ ಮೈಲಾರ ಮಹಾದೇವ’ ಕೃತಿಗೆ ಜಯಲಕ್ಷ್ಮಿ ಶ್ರೀನಿವಾಸಯ್ಯ ದತ್ತಿ ಸಾಹಿತ್ಯ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರಾದ ಕೆ.ಸಿ. ನಾರಾಯಣಪ್ಪ, ಎಸ್.ವಿ.ಟಿ. ಗುಪ್ತ, ಎಚ್.ಎಸ್. ಹನುಮಂತರಾವ್ ಮತ್ತು ರಘುನಾಥ್ ರಾವ್ ಎನ್. ಅವರುಗಳನ್ನು ಸನ್ಮಾನಿಸಲಾಯಿತು. ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.