‘ಪ್ರತಿಭಟನೆ ನಡೆಸಲುಕಟ್ಟಡದಲ್ಲಿ ಸ್ಥಳಾವಕಾಶ ಕಲ್ಪಿಸಲಾಗುತ್ತದೆ. ಪ್ರತಿಭಟನೆ ಸ್ಥಳದ ಚಾವಣಿ ಹಾಗೂ ಸೌರ ವಿದ್ಯುತ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ವಿದ್ಯುತ್ ಸಂಪರ್ಕ, ಅಗ್ನಿಶಾಮಕ ವ್ಯವಸ್ಥೆ ಅಳವಡಿಕೆ, ಆವರಣ ಗೋಡೆ ನಿರ್ಮಾಣ, ಪ್ರವೇಶ ದ್ವಾರ, ಪಾದಚಾರಿ ಮಾರ್ಗದ ಕೆಲಸಗಳು ಬಾಕಿ ಇವೆ. ಇವುಗಳನ್ನೂ ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುವುದು. ಈ ಕಟ್ಟಡದ ಹಸಿರೀಕರಣಕ್ಕೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಅವರು ತಿಳಿಸಿದರು.