ಕೆ.ಆರ್.ಪುರ: ಮಹದೇವಪುರ ಕ್ಷೇತ್ರದ ಗುಂಜೂರು ಹೊಸಹಳ್ಳಿ ಮುಖ್ಯ ರಸ್ತೆಯ ಗಣೇಶ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಕಲ್ಲಿನ ಗಣೇಶ ಮೂರ್ತಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ.
ಭಾನುವಾರ ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿನಲ್ಲಿ ಕಾರಿನಿಂದ ಇಳಿದ ಇಬ್ಬರು ದುಷ್ಕರ್ಮಿಗಳು ಗಣೇಶ ವಿಗ್ರಹಕ್ಕೆ ಹಾನಿ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ದೃಶ್ಯಾವಳಿಗಳು ದೇವಾಲಯ ಮುಂದೆ ಇರುವ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗ್ರಾಮಸ್ಥರು ವರ್ತೂರು ಪೋಲಿಸ್ ಠಾಣೆಗೆ ದೂರು ದಾಖಲಿಸಿ ಕೂಡಲೇ ಶಾಂತಿ ಕದಡುವ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ಜರಗಿಸಬೇಕೆಂದು ಒತ್ತಾಯಿಸಿದ್ದಾರೆ.