<p><strong>ಬೆಂಗಳೂರು:</strong> ಶಾಸಕಿ ಸೌಮ್ಯಾ ರೆಡ್ಡಿ ಅವರು ಸಾರ್ವಜನಿಕರಿಗೆ ಗುರುವಾರ ಮೂರು ಸಾವಿರಕ್ಕೂ ಹೆಚ್ಚು ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಿಸಿದರು.</p>.<p>ಜಯನಗರದ ವಿಶ್ವೇಶ್ವರಯ್ಯ ಸಂಕೀರ್ಣದಲ್ಲಿ ಜಯನಗರ ಬಾಂಧವ ಸಂಸ್ಥೆಯ ಮೂಲಕ ಗೌರಿಗಣೇಶ ಮೂರ್ತಿಗಳನ್ನು ವಿತರಿಸಲಾಯಿತು. ಜೇಡಿಮಣ್ಣಿನಿಂದ ಮಾಡಿರುವ ಈ ಮೂರ್ತಿಗಳಲ್ಲಿ ಸಸಿಗಳ ಬೀಜಗಳನ್ನು ಹಾಕಲಾಗಿದೆ.</p>.<p>‘ನಗರದಲ್ಲಿ ಎಲ್ಲರೂ ಪರಿಸರಸ್ನೇಹಿ ಹಬ್ಬ ಆಚರಿಸಬೇಕೆಂಬುದು ನಮ್ಮ ಸಂಸ್ಥೆಯ ಉದ್ದೇಶ. ಅದಕ್ಕಾಗಿ ಪರಿಸರಸ್ನೇಹಿ ಮೂರ್ತಿಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎನ್. ನಾಗರಾಜ್ ಹೇಳಿದರು.</p>.<p>ಸೌಮ್ಯಾ ರೆಡ್ಡಿ, ‘ಪಿಒಪಿ ಮೂರ್ತಿಗಳನ್ನು ಕೆರೆಗಳಲ್ಲಿ ವಿಸರ್ಜನೆ ಮಾಡಿದಾಗ ಅವು ನೀರಿನಲ್ಲಿ ಸಂಪೂರ್ಣವಾಗಿ ಕರಗುವುದಿಲ್ಲ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮವಾಗುತ್ತದೆ. ಆದರೆ, ಜೇಡಿಮಣ್ಣಿನಿಂದ ತಯಾರಿಸಿದ ಮೂರ್ತಿಗಳು ಸುಲಭವಾಗಿ ಕರಗುವುದಲ್ಲದೆ, ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ’ ಎಂದರು.</p>.<p>ಶಾಸಕ ರಾಮಲಿಂಗಾರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಾಸಕಿ ಸೌಮ್ಯಾ ರೆಡ್ಡಿ ಅವರು ಸಾರ್ವಜನಿಕರಿಗೆ ಗುರುವಾರ ಮೂರು ಸಾವಿರಕ್ಕೂ ಹೆಚ್ಚು ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಿಸಿದರು.</p>.<p>ಜಯನಗರದ ವಿಶ್ವೇಶ್ವರಯ್ಯ ಸಂಕೀರ್ಣದಲ್ಲಿ ಜಯನಗರ ಬಾಂಧವ ಸಂಸ್ಥೆಯ ಮೂಲಕ ಗೌರಿಗಣೇಶ ಮೂರ್ತಿಗಳನ್ನು ವಿತರಿಸಲಾಯಿತು. ಜೇಡಿಮಣ್ಣಿನಿಂದ ಮಾಡಿರುವ ಈ ಮೂರ್ತಿಗಳಲ್ಲಿ ಸಸಿಗಳ ಬೀಜಗಳನ್ನು ಹಾಕಲಾಗಿದೆ.</p>.<p>‘ನಗರದಲ್ಲಿ ಎಲ್ಲರೂ ಪರಿಸರಸ್ನೇಹಿ ಹಬ್ಬ ಆಚರಿಸಬೇಕೆಂಬುದು ನಮ್ಮ ಸಂಸ್ಥೆಯ ಉದ್ದೇಶ. ಅದಕ್ಕಾಗಿ ಪರಿಸರಸ್ನೇಹಿ ಮೂರ್ತಿಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎನ್. ನಾಗರಾಜ್ ಹೇಳಿದರು.</p>.<p>ಸೌಮ್ಯಾ ರೆಡ್ಡಿ, ‘ಪಿಒಪಿ ಮೂರ್ತಿಗಳನ್ನು ಕೆರೆಗಳಲ್ಲಿ ವಿಸರ್ಜನೆ ಮಾಡಿದಾಗ ಅವು ನೀರಿನಲ್ಲಿ ಸಂಪೂರ್ಣವಾಗಿ ಕರಗುವುದಿಲ್ಲ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮವಾಗುತ್ತದೆ. ಆದರೆ, ಜೇಡಿಮಣ್ಣಿನಿಂದ ತಯಾರಿಸಿದ ಮೂರ್ತಿಗಳು ಸುಲಭವಾಗಿ ಕರಗುವುದಲ್ಲದೆ, ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ’ ಎಂದರು.</p>.<p>ಶಾಸಕ ರಾಮಲಿಂಗಾರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>