<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾನುವಾರ (ಸೆಪ್ಟೆಂಬರ್ 8) 83,404 ಗಣೇಶ ಮೂರ್ತಿಗಳನ್ನು<br>ವಿಸರ್ಜಿಸಲಾಗಿದೆ.</p><p>ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳಲ್ಲಿ ಮೂರ್ತಿಗಳನ್ನು<br>ವಿಸರ್ಜಿಸಲಾಗಿದೆ. ದಕ್ಷಿಣ ವಲಯದಲ್ಲಿ ಅತಿಹೆಚ್ಚು (47,055) ಮೂರ್ತಿಗಳು ವಿಸರ್ಜನೆಯಾಗಿವೆ. ಪೂರ್ವ ವಲಯದಲ್ಲಿ 12,652, ಪಶ್ಚಿಮದಲ್ಲಿ 10,828, ಬೊಮ್ಮನಹಳ್ಳಿಯಲ್ಲಿ 2,276, ಯಲಹಂಕದಲ್ಲಿ 4096, ಆರ್.ಆರ್.ನಗರದಲ್ಲಿ 3,859, ಮಹದೇವಪುರದಲ್ಲಿ 2,224 ಹಾಗೂ ದಾಸರಹಳ್ಳಿ ವಲಯದಲ್ಲಿ 424 ಮೂರ್ತಿಗಳು ವಿಸ ರ್ಜನೆಯಾಗಿವೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.</p><p><strong>ಸ್ವಚ್ಛತಾ ಕಾರ್ಯ:</strong> ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಮಂಗಳವಾರ ಸ್ವಚ್ಛತಾ ಕಾರ್ಯ ಕೈಗೊಂಡಿರುವುದರಿಂದ ಗಣೇಶ ವಿಸರ್ಜನೆಯನ್ನು ನಿರ್ಬಂಧಿಸಲಾಗಿದೆ. ಸೆ.11ರಿಂದ (ಬುಧವಾರ) 17ರವರೆಗೆ ಮೂರ್ತಿ ವಿಸರ್ಜನೆಗೆ ಅವಕಾಶ ಇರುತ್ತದೆ ಎಂದು ಪದ್ಮನಾಭನಗರ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾನುವಾರ (ಸೆಪ್ಟೆಂಬರ್ 8) 83,404 ಗಣೇಶ ಮೂರ್ತಿಗಳನ್ನು<br>ವಿಸರ್ಜಿಸಲಾಗಿದೆ.</p><p>ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳಲ್ಲಿ ಮೂರ್ತಿಗಳನ್ನು<br>ವಿಸರ್ಜಿಸಲಾಗಿದೆ. ದಕ್ಷಿಣ ವಲಯದಲ್ಲಿ ಅತಿಹೆಚ್ಚು (47,055) ಮೂರ್ತಿಗಳು ವಿಸರ್ಜನೆಯಾಗಿವೆ. ಪೂರ್ವ ವಲಯದಲ್ಲಿ 12,652, ಪಶ್ಚಿಮದಲ್ಲಿ 10,828, ಬೊಮ್ಮನಹಳ್ಳಿಯಲ್ಲಿ 2,276, ಯಲಹಂಕದಲ್ಲಿ 4096, ಆರ್.ಆರ್.ನಗರದಲ್ಲಿ 3,859, ಮಹದೇವಪುರದಲ್ಲಿ 2,224 ಹಾಗೂ ದಾಸರಹಳ್ಳಿ ವಲಯದಲ್ಲಿ 424 ಮೂರ್ತಿಗಳು ವಿಸ ರ್ಜನೆಯಾಗಿವೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.</p><p><strong>ಸ್ವಚ್ಛತಾ ಕಾರ್ಯ:</strong> ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಮಂಗಳವಾರ ಸ್ವಚ್ಛತಾ ಕಾರ್ಯ ಕೈಗೊಂಡಿರುವುದರಿಂದ ಗಣೇಶ ವಿಸರ್ಜನೆಯನ್ನು ನಿರ್ಬಂಧಿಸಲಾಗಿದೆ. ಸೆ.11ರಿಂದ (ಬುಧವಾರ) 17ರವರೆಗೆ ಮೂರ್ತಿ ವಿಸರ್ಜನೆಗೆ ಅವಕಾಶ ಇರುತ್ತದೆ ಎಂದು ಪದ್ಮನಾಭನಗರ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>