<p><strong>ಬೆಂಗಳೂರು:</strong> ಗಣೇಶ ಹಬ್ಬದ ದಿನವಾದ ಬುಧವಾರ ನಗರದಲ್ಲಿ 2.19 ಲಕ್ಷ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.</p>.<p>ಹಲವು ಪ್ರದೇಶಗಳಲ್ಲಿ ಗಣೇಶ ಹಬ್ಬದ ದಿನ ಬೆಳಿಗ್ಗೆ ಮೂರ್ತಿಗೆ ಪೂಜೆ ನೆರವೇರಿಸಿ, ಸಂಜೆಯೇ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಬಿಬಿಎಂಪಿ ಸಜ್ಜುಗೊಳಿಸಿದ್ದ ಕೆರೆ, ಕಲ್ಯಾಣಿ, ಮೊಬೈಲ್ ಟ್ಯಾಂಕ್ಗಳಲ್ಲಿ, ಕೆಲವು ಕಡೆ ಮನೆಗಳಲ್ಲಿನ ತೊಟ್ಟಿ ಅಥವಾ ಬಕೆಟ್ಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಯಿತು.</p>.<p>ಪಿಒಪಿ ಮೂರ್ತಿಗಳ ನಿಷೇಧವಿದ್ದರೂ ಯಡಿಯೂರು ಕೆರೆಯೊಂದಲ್ಲೇ 1,200 ಪಿಒಪಿ ಮೂರ್ತಿಗಳ ವಿಸರ್ಜನೆಯಾಗಿದೆ. ಇನ್ನುಳಿದ ಪ್ರದೇಶಗಳಲ್ಲೂ ಪಿಒಪಿ ಮೂರ್ತಿಗಳ ವಿಸರ್ಜನೆಯಾಗಿದೆ. ಆದರೆ, ಬಿಬಿಎಂಪಿ ಅಂಕಿ–ಅಂಶಗಳನ್ನು ನೀಡಿಲ್ಲ.</p>.<p>ಬಿಬಿಎಂಪಿಯ ಎಂಟೂ ವಲಯಗಳ ಕೆರೆಗಳಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಕಲ್ಯಾಣಿಗಳಲ್ಲಿ 1.53 ಲಕ್ಷ ಮೂರ್ತಿಗಳು, ಮೊಬೈಲ್ ಟ್ಯಾಂಕರ್ಗಳಲ್ಲಿ 65,717 ಮೂರ್ತಿಗಳು, ಯಡಿಯೂರು ಕೆರೆಯಲ್ಲಿ 3,800 ಕಾಗದದ ಮೂರ್ತಿಗಳು ವಿಸರ್ಜನೆಯಾಗಿವೆ.</p>.<p>‘ನಗರದಲ್ಲಿ ಜನರು ಪರಿಸರಸ್ನೇಹಿ ಮೂರ್ತಿಗಳನ್ನು ಪೂಜಿಸಿ ವಿಸರ್ಜನೆ ಮಾಡಿದ್ದಾರೆ. ಬಿಬಿಎಂಪಿಯ ಸೌಲಭ್ಯಗಳನ್ನು ಬಳಸಿಕೊಂಡಿದ್ದಾರೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಹೇಳಿದರು.</p>.<p>‘ಪಿಒಪಿ ಮೂರ್ತಿಗಳ ನಿಷೇಧವಿದ್ದರೂ ಜನರು ಅವುಗಳನ್ನೇ ಪೂಜಿಸಿ, ವಿಸರ್ಜನೆ ಮಾಡಿದ್ದಾರೆ. ಇಂತಹ ಮೂರ್ತಿಗಳನ್ನು ಬಳಸದಿರುವ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ವರ್ಷ ಪೂರ್ತಿ ನಡೆಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗಣೇಶ ಹಬ್ಬದ ದಿನವಾದ ಬುಧವಾರ ನಗರದಲ್ಲಿ 2.19 ಲಕ್ಷ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.</p>.<p>ಹಲವು ಪ್ರದೇಶಗಳಲ್ಲಿ ಗಣೇಶ ಹಬ್ಬದ ದಿನ ಬೆಳಿಗ್ಗೆ ಮೂರ್ತಿಗೆ ಪೂಜೆ ನೆರವೇರಿಸಿ, ಸಂಜೆಯೇ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಬಿಬಿಎಂಪಿ ಸಜ್ಜುಗೊಳಿಸಿದ್ದ ಕೆರೆ, ಕಲ್ಯಾಣಿ, ಮೊಬೈಲ್ ಟ್ಯಾಂಕ್ಗಳಲ್ಲಿ, ಕೆಲವು ಕಡೆ ಮನೆಗಳಲ್ಲಿನ ತೊಟ್ಟಿ ಅಥವಾ ಬಕೆಟ್ಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಯಿತು.</p>.<p>ಪಿಒಪಿ ಮೂರ್ತಿಗಳ ನಿಷೇಧವಿದ್ದರೂ ಯಡಿಯೂರು ಕೆರೆಯೊಂದಲ್ಲೇ 1,200 ಪಿಒಪಿ ಮೂರ್ತಿಗಳ ವಿಸರ್ಜನೆಯಾಗಿದೆ. ಇನ್ನುಳಿದ ಪ್ರದೇಶಗಳಲ್ಲೂ ಪಿಒಪಿ ಮೂರ್ತಿಗಳ ವಿಸರ್ಜನೆಯಾಗಿದೆ. ಆದರೆ, ಬಿಬಿಎಂಪಿ ಅಂಕಿ–ಅಂಶಗಳನ್ನು ನೀಡಿಲ್ಲ.</p>.<p>ಬಿಬಿಎಂಪಿಯ ಎಂಟೂ ವಲಯಗಳ ಕೆರೆಗಳಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಕಲ್ಯಾಣಿಗಳಲ್ಲಿ 1.53 ಲಕ್ಷ ಮೂರ್ತಿಗಳು, ಮೊಬೈಲ್ ಟ್ಯಾಂಕರ್ಗಳಲ್ಲಿ 65,717 ಮೂರ್ತಿಗಳು, ಯಡಿಯೂರು ಕೆರೆಯಲ್ಲಿ 3,800 ಕಾಗದದ ಮೂರ್ತಿಗಳು ವಿಸರ್ಜನೆಯಾಗಿವೆ.</p>.<p>‘ನಗರದಲ್ಲಿ ಜನರು ಪರಿಸರಸ್ನೇಹಿ ಮೂರ್ತಿಗಳನ್ನು ಪೂಜಿಸಿ ವಿಸರ್ಜನೆ ಮಾಡಿದ್ದಾರೆ. ಬಿಬಿಎಂಪಿಯ ಸೌಲಭ್ಯಗಳನ್ನು ಬಳಸಿಕೊಂಡಿದ್ದಾರೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಹೇಳಿದರು.</p>.<p>‘ಪಿಒಪಿ ಮೂರ್ತಿಗಳ ನಿಷೇಧವಿದ್ದರೂ ಜನರು ಅವುಗಳನ್ನೇ ಪೂಜಿಸಿ, ವಿಸರ್ಜನೆ ಮಾಡಿದ್ದಾರೆ. ಇಂತಹ ಮೂರ್ತಿಗಳನ್ನು ಬಳಸದಿರುವ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ವರ್ಷ ಪೂರ್ತಿ ನಡೆಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>