‘ಬಿಬಿಎಂಪಿ ವ್ಯಾಪ್ಯಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು’ ಎಂದು ಕೋರಿ ‘ಸಿಟಿಜನ್ಸ್ ಆ್ಯಕ್ಷನ್ ಗ್ರೂಪ್’ ಕಾರ್ಯದರ್ಶಿ ನೊಮಿತಾ ಚಾಂಡಿ, ‘ಜೆ.ಪಿ ನಗರ 4ನೇ ಹಂತದ ಡಾಲರ್ಸ್ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ’ದ ಕಾರ್ಯದರ್ಶಿ ಗುಂಡಾ ಭಟ್ ಮತ್ತು ‘ಸಮರ್ಪಣಾ’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮೇಲಿನ ಮಧ್ಯಂತರ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ಮುಂದುವರಿಸಿತು.