<p><strong>ಬೆಂಗಳೂರು</strong>: ಗೌರಿ, ಗಣೇಶ ಹಬ್ಬವನ್ನು ಸಂಭ್ರಮ–ಸಡಗರದಿಂದ ಆಚರಿಸಲು ನಗರದ ಜನತೆ ಸಜ್ಜಾಗುತ್ತಿದ್ದು, ಹಬ್ಬಕ್ಕೆ ಬೇಕಾದ ವಿಗ್ರಹ, ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಶನಿವಾರ ಜೋರಾಗಿತ್ತು.</p>.<p>ವರಮಹಾಲಕ್ಷ್ಮಿ ಹಬ್ಬದಲ್ಲಿ ಗಗನಕ್ಕೇರಿದ್ದ ಹೂವು ಹಣ್ಣು–ಹಂಪಲು ಸೇರಿ ಅಗತ್ಯ ವಸ್ತುಗಳ ಬೆಲೆ ಈಗ ಇಳಿದಿದೆ. ಆದರೆ, ಆ ಪ್ರಮಾಣದ ಗ್ರಾಹಕರು ಮಾರುಕಟ್ಟೆಗಳಲ್ಲಿ ಈ ಬಾರಿ ಕಂಡುಬರಲಿಲ್ಲ. ಗೌರಿ–ಗಣೇಶ ಹಬ್ಬಕ್ಕೆ ತರಕಾರಿ, ಹಣ್ಣು, ಹೂವಿನ ದರಗಳ ಸಾಕಷ್ಟು ಕಡಿಮೆಯಾಗಿದೆ.</p>.<p>ಕೆ.ಆರ್.ಮಾರುಕಟ್ಟೆಯಲ್ಲಿ ಬೆಳಗಿನ ಜಾವದ ವೇಳೆಗೇ ಜನ ಜಮಾಯಿಸಿದ್ದರು. ಚಿಕ್ಕಪೇಟೆಯ ಅವೆನ್ಯೂ ರಸ್ತೆ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ ಜನದಟ್ಟಣೆ ಹೆಚ್ಚಿತ್ತು.</p>.<p>‘ಬಟಾಣಿ ಪ್ರತಿ ಕೆ.ಜಿಗೆ ₹100ರಂತೆ ಮಾರಾಟವಾಗುತ್ತಿದೆ. ಶತಕ ಬಾರಿಸಿದ್ದ ಟೊಮೆಟೊ ಕೆ.ಜಿ ₹15, ಈರುಳ್ಳಿ ₹ 30, ಹಸಿಮೆಣಸಿನಕಾಯಿ ₹80ರಂತೆ ಮಾರಾಟವಾಗುತ್ತಿವೆ. ಅದನ್ನು ಬಿಟ್ಟು ಬಹುತೇಕ ತರಕಾರಿ ದರಗಳ ಕಡಿಮೆಯಾಗಿದೆ. ಮಾರುಕಟ್ಟೆಗೆ ತರಕಾರಿ ಪೂರೈಕೆ ಹೆಚ್ಚಿದ್ದು, ಬೇಡಿಕೆ ಕಡಿಮೆ ಇದೆ. ಆದ್ದರಿಂದ ಬೆಲೆಗಳಲ್ಲಿ ಇಳಿಕೆಯಾಗಿದೆ’ ಎಂದು ಕೆ.ಆರ್. ಮಾರುಕಟ್ಟೆಯ ತರಕಾರಿ ವ್ಯಾಪಾರಿ ಅಕ್ರಂ, ತಬ್ರೇಜ್ ತಿಳಿಸಿದರು. </p>.<p><strong>ಹೆಚ್ಚಾದ ಹೂ ದರ:</strong> ‘ರಾಜ್ಯದಲ್ಲಿ ಮಳೆ ಕೊರತೆಯಿಂದ ಮಾರುಕಟ್ಟೆಗೆ ಹೂವು ಆವಕ ಕಡಿಮೆಯಾಗಿದ್ದು, ಆದ್ದರಿಂದ ಸ್ವಲ್ಪ ದುಬಾರಿಯಾಗಿದೆ. ಆದರೂ, ವರಮಹಾಲಕ್ಷ್ಮಿ ಹಬ್ಬದ ದರಕ್ಕೆ ಹೋಲಿಸಿದರೆ ಈ ಬಾರಿ ಕಡಿಮೆಯಾಗಿದೆ’ ಎಂದು ಕೆ.ಆರ್. ಮಾರುಕಟ್ಟೆಯ ಹೂವಿನ ವ್ಯಾಪಾರಿ ಮಂಜುನಾಥ್ ಹೇಳಿದರು<strong>.</strong></p>.<p>‘ಈ ಬಾರಿಯ ಗಣೇಶ ಹಬ್ಬದ ಸಂದರ್ಭದಲ್ಲಿ ಮಲ್ಲಿಗೆ ಕೆ.ಜಿ.ಗೆ ₹800, ಕನಕಾಂಬರ ₹1 ಸಾವಿರ ಇದೆ. ಸೇವಂತಿಗೆ ₹ 150, ಗುಲಾಬಿ ₹ 200, ಸುಗಂಧರಾಜ ₹200ರಂತೆ ಮಾರಾಟವಾಗುತ್ತಿವೆ’ ಎಂದು ತಿಳಿಸಿದರು.</p>.<p>ಗರಿಕೆ, ಬೇಲದಹಣ್ಣು, ಎಕ್ಕದ ಹೂವಿನಹಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿತ್ತು. ಜತೆಗೆ ಬಾಳೆಕಂಬ, ಹೂವಿನ ಹಾರ ಇತ್ಯಾದಿ ಪೂಜಾ ಸಾಮಗ್ರಿಗಳನ್ನು ಕೊಂಡೊಯ್ದರು. ಎಕ್ಕದ ಹಾರಕ್ಕೆ ₹50, ಗರಿಕೆಗೆ ₹30, ಪ್ರದೇಶವಾರು ದರದಲ್ಲಿ ವ್ಯತ್ಯಾಸವಿತ್ತು. ಬಾಳೆಕಂಬ ಜೋಡಿಗೆ ₹50ನಿಂದ ₹200 ವರೆಗೆ ಮಾರಾಟವಾಗುತ್ತಿದ್ದವು.</p>.<p>ಗಾಂಧಿ ಬಜಾರ್, ಜಯನಗರ, ಬಸವನಗುಡಿ, ಬನಶಂಕರಿ, ರಾಜಾಜಿನಗರ, ಮಲ್ಲೇಶ್ವರ ಸೇರಿ ನಗರದ ವಿವಿಧ ಭಾಗಗಳಲ್ಲಿ ಹೂವು, ಹಣ್ಣಿನ ತಾತ್ಕಾಲಿಕ ಮಳಿಗೆಗಳು, ಗಣೇಶ ಮೂರ್ತಿಯ ಅಂಗಡಿಗಳು ತಲೆ ಎತ್ತಿವೆ.</p>.<p>ಮಾರುಕಟ್ಟೆಗೆ ಬಗೆ ಬಗೆಯ ಗೌರಿ-ಗಣೇಶ ಮೂರ್ತಿಗಳು ಬಂದಿದ್ದು, ₹100 ರಿಂದ ₹5 ಸಾವಿರದವರೆಗೆ ಮೂರ್ತಿಗಳು ಮಾರಾಟವಾಗುತ್ತಿವೆ. ಮತ್ತೊಂದೆಡೆ ಗೌರಿ ಹಬ್ಬ ಆಚರಿಸುವವರು ಗಜಗೌರಿ, ಮಡಿಗೌರಿ ಮತ್ತಿತರ ಬಗೆಯ ಗೌರಿಯ ಮೂರ್ತಿಗಳನ್ನು ಮಹಿಳೆಯರು ಖರೀದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗೌರಿ, ಗಣೇಶ ಹಬ್ಬವನ್ನು ಸಂಭ್ರಮ–ಸಡಗರದಿಂದ ಆಚರಿಸಲು ನಗರದ ಜನತೆ ಸಜ್ಜಾಗುತ್ತಿದ್ದು, ಹಬ್ಬಕ್ಕೆ ಬೇಕಾದ ವಿಗ್ರಹ, ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಶನಿವಾರ ಜೋರಾಗಿತ್ತು.</p>.<p>ವರಮಹಾಲಕ್ಷ್ಮಿ ಹಬ್ಬದಲ್ಲಿ ಗಗನಕ್ಕೇರಿದ್ದ ಹೂವು ಹಣ್ಣು–ಹಂಪಲು ಸೇರಿ ಅಗತ್ಯ ವಸ್ತುಗಳ ಬೆಲೆ ಈಗ ಇಳಿದಿದೆ. ಆದರೆ, ಆ ಪ್ರಮಾಣದ ಗ್ರಾಹಕರು ಮಾರುಕಟ್ಟೆಗಳಲ್ಲಿ ಈ ಬಾರಿ ಕಂಡುಬರಲಿಲ್ಲ. ಗೌರಿ–ಗಣೇಶ ಹಬ್ಬಕ್ಕೆ ತರಕಾರಿ, ಹಣ್ಣು, ಹೂವಿನ ದರಗಳ ಸಾಕಷ್ಟು ಕಡಿಮೆಯಾಗಿದೆ.</p>.<p>ಕೆ.ಆರ್.ಮಾರುಕಟ್ಟೆಯಲ್ಲಿ ಬೆಳಗಿನ ಜಾವದ ವೇಳೆಗೇ ಜನ ಜಮಾಯಿಸಿದ್ದರು. ಚಿಕ್ಕಪೇಟೆಯ ಅವೆನ್ಯೂ ರಸ್ತೆ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ ಜನದಟ್ಟಣೆ ಹೆಚ್ಚಿತ್ತು.</p>.<p>‘ಬಟಾಣಿ ಪ್ರತಿ ಕೆ.ಜಿಗೆ ₹100ರಂತೆ ಮಾರಾಟವಾಗುತ್ತಿದೆ. ಶತಕ ಬಾರಿಸಿದ್ದ ಟೊಮೆಟೊ ಕೆ.ಜಿ ₹15, ಈರುಳ್ಳಿ ₹ 30, ಹಸಿಮೆಣಸಿನಕಾಯಿ ₹80ರಂತೆ ಮಾರಾಟವಾಗುತ್ತಿವೆ. ಅದನ್ನು ಬಿಟ್ಟು ಬಹುತೇಕ ತರಕಾರಿ ದರಗಳ ಕಡಿಮೆಯಾಗಿದೆ. ಮಾರುಕಟ್ಟೆಗೆ ತರಕಾರಿ ಪೂರೈಕೆ ಹೆಚ್ಚಿದ್ದು, ಬೇಡಿಕೆ ಕಡಿಮೆ ಇದೆ. ಆದ್ದರಿಂದ ಬೆಲೆಗಳಲ್ಲಿ ಇಳಿಕೆಯಾಗಿದೆ’ ಎಂದು ಕೆ.ಆರ್. ಮಾರುಕಟ್ಟೆಯ ತರಕಾರಿ ವ್ಯಾಪಾರಿ ಅಕ್ರಂ, ತಬ್ರೇಜ್ ತಿಳಿಸಿದರು. </p>.<p><strong>ಹೆಚ್ಚಾದ ಹೂ ದರ:</strong> ‘ರಾಜ್ಯದಲ್ಲಿ ಮಳೆ ಕೊರತೆಯಿಂದ ಮಾರುಕಟ್ಟೆಗೆ ಹೂವು ಆವಕ ಕಡಿಮೆಯಾಗಿದ್ದು, ಆದ್ದರಿಂದ ಸ್ವಲ್ಪ ದುಬಾರಿಯಾಗಿದೆ. ಆದರೂ, ವರಮಹಾಲಕ್ಷ್ಮಿ ಹಬ್ಬದ ದರಕ್ಕೆ ಹೋಲಿಸಿದರೆ ಈ ಬಾರಿ ಕಡಿಮೆಯಾಗಿದೆ’ ಎಂದು ಕೆ.ಆರ್. ಮಾರುಕಟ್ಟೆಯ ಹೂವಿನ ವ್ಯಾಪಾರಿ ಮಂಜುನಾಥ್ ಹೇಳಿದರು<strong>.</strong></p>.<p>‘ಈ ಬಾರಿಯ ಗಣೇಶ ಹಬ್ಬದ ಸಂದರ್ಭದಲ್ಲಿ ಮಲ್ಲಿಗೆ ಕೆ.ಜಿ.ಗೆ ₹800, ಕನಕಾಂಬರ ₹1 ಸಾವಿರ ಇದೆ. ಸೇವಂತಿಗೆ ₹ 150, ಗುಲಾಬಿ ₹ 200, ಸುಗಂಧರಾಜ ₹200ರಂತೆ ಮಾರಾಟವಾಗುತ್ತಿವೆ’ ಎಂದು ತಿಳಿಸಿದರು.</p>.<p>ಗರಿಕೆ, ಬೇಲದಹಣ್ಣು, ಎಕ್ಕದ ಹೂವಿನಹಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿತ್ತು. ಜತೆಗೆ ಬಾಳೆಕಂಬ, ಹೂವಿನ ಹಾರ ಇತ್ಯಾದಿ ಪೂಜಾ ಸಾಮಗ್ರಿಗಳನ್ನು ಕೊಂಡೊಯ್ದರು. ಎಕ್ಕದ ಹಾರಕ್ಕೆ ₹50, ಗರಿಕೆಗೆ ₹30, ಪ್ರದೇಶವಾರು ದರದಲ್ಲಿ ವ್ಯತ್ಯಾಸವಿತ್ತು. ಬಾಳೆಕಂಬ ಜೋಡಿಗೆ ₹50ನಿಂದ ₹200 ವರೆಗೆ ಮಾರಾಟವಾಗುತ್ತಿದ್ದವು.</p>.<p>ಗಾಂಧಿ ಬಜಾರ್, ಜಯನಗರ, ಬಸವನಗುಡಿ, ಬನಶಂಕರಿ, ರಾಜಾಜಿನಗರ, ಮಲ್ಲೇಶ್ವರ ಸೇರಿ ನಗರದ ವಿವಿಧ ಭಾಗಗಳಲ್ಲಿ ಹೂವು, ಹಣ್ಣಿನ ತಾತ್ಕಾಲಿಕ ಮಳಿಗೆಗಳು, ಗಣೇಶ ಮೂರ್ತಿಯ ಅಂಗಡಿಗಳು ತಲೆ ಎತ್ತಿವೆ.</p>.<p>ಮಾರುಕಟ್ಟೆಗೆ ಬಗೆ ಬಗೆಯ ಗೌರಿ-ಗಣೇಶ ಮೂರ್ತಿಗಳು ಬಂದಿದ್ದು, ₹100 ರಿಂದ ₹5 ಸಾವಿರದವರೆಗೆ ಮೂರ್ತಿಗಳು ಮಾರಾಟವಾಗುತ್ತಿವೆ. ಮತ್ತೊಂದೆಡೆ ಗೌರಿ ಹಬ್ಬ ಆಚರಿಸುವವರು ಗಜಗೌರಿ, ಮಡಿಗೌರಿ ಮತ್ತಿತರ ಬಗೆಯ ಗೌರಿಯ ಮೂರ್ತಿಗಳನ್ನು ಮಹಿಳೆಯರು ಖರೀದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>