<p><strong>ಬೆಂಗಳೂರು:</strong> ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಿರುವ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಕ್ರಮ ಖಂಡಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಮತ್ತು ಇತರೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ವಾರ್ಡ್ಗೆ ಒಂದೇ ಗಣೇಶ ಮೂರ್ತಿ ಸ್ಥಾಪನೆ ಮಾಡಬೇಕು, ನಾಲ್ಕು ಅಡಿಗಿಂತ ಎತ್ತರ ಇರಬಾರದು, ಮೂರು ದಿನ ಮಾತ್ರ ಉತ್ಸವ ನಡೆಯಬೇಕು ಎಂಬ ಷರತ್ತುಗಳನ್ನು ವಿಧಿಸುವ ಮೂಲಕ ಹಬ್ಬದ ಆಚರಣೆಗೆ ಅಡ್ಡಿ ಮಾಡಲಾಗುತ್ತಿದೆ. ಈ ನಿರ್ಬಂಧಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜು ಒತ್ತಾಯಿಸಿದರು.</p>.<p>‘12 ಅಡಿ ಎತ್ತರದವರೆಗಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅನುಮತಿ ನೀಡಬೇಕು ಮತ್ತು ಕನಿಷ್ಠ ಐದು ದಿನಗಳವರೆಗಾದರೂ ಉತ್ಸವ ನಡೆಸಲು ಅವಕಾಶ ನೀಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p><a href="https://www.prajavani.net/karnataka-news/ganesh-chaturthi-2021-karnataka-government-given-permission-to-celebrate-for-five-days-864097.html">5 ದಿನಗಳ ಕಾಲ ಗಣೇಶೋತ್ಸವಕ್ಕೆ ಅನುಮತಿ: ಆಚರಣೆಗಿರುವ ಷರತ್ತುಗಳ ಪಟ್ಟಿ ಇಲ್ಲಿದೆ</a></p>.<p>‘ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೆ ನಾವೇ ಸರ್ಕಾರದ ಆದೇಶವನ್ನು ಪಾಲಿಸುತ್ತಿದ್ದೆವು. ಆದರೆ, ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಆದರೂ ಅನೇಕ ಷರತ್ತುಗಳನ್ನು ವಿಧಿಸಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರದ ವಿವಿಧ ಗಣೇಶೋತ್ಸವ ಸಮಿತಿಗಳು, ಬಿಬಿಎಂಪಿ ಕೇಂದ್ರ ಕಚೇರಿಯ ಆವರಣಕ್ಕೇ ಗಣೇಶ ಮೂರ್ತಿಗಳನ್ನು ತಂದು ಪ್ರತಿಭಟನೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಿರುವ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಕ್ರಮ ಖಂಡಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಮತ್ತು ಇತರೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ವಾರ್ಡ್ಗೆ ಒಂದೇ ಗಣೇಶ ಮೂರ್ತಿ ಸ್ಥಾಪನೆ ಮಾಡಬೇಕು, ನಾಲ್ಕು ಅಡಿಗಿಂತ ಎತ್ತರ ಇರಬಾರದು, ಮೂರು ದಿನ ಮಾತ್ರ ಉತ್ಸವ ನಡೆಯಬೇಕು ಎಂಬ ಷರತ್ತುಗಳನ್ನು ವಿಧಿಸುವ ಮೂಲಕ ಹಬ್ಬದ ಆಚರಣೆಗೆ ಅಡ್ಡಿ ಮಾಡಲಾಗುತ್ತಿದೆ. ಈ ನಿರ್ಬಂಧಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜು ಒತ್ತಾಯಿಸಿದರು.</p>.<p>‘12 ಅಡಿ ಎತ್ತರದವರೆಗಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅನುಮತಿ ನೀಡಬೇಕು ಮತ್ತು ಕನಿಷ್ಠ ಐದು ದಿನಗಳವರೆಗಾದರೂ ಉತ್ಸವ ನಡೆಸಲು ಅವಕಾಶ ನೀಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p><a href="https://www.prajavani.net/karnataka-news/ganesh-chaturthi-2021-karnataka-government-given-permission-to-celebrate-for-five-days-864097.html">5 ದಿನಗಳ ಕಾಲ ಗಣೇಶೋತ್ಸವಕ್ಕೆ ಅನುಮತಿ: ಆಚರಣೆಗಿರುವ ಷರತ್ತುಗಳ ಪಟ್ಟಿ ಇಲ್ಲಿದೆ</a></p>.<p>‘ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೆ ನಾವೇ ಸರ್ಕಾರದ ಆದೇಶವನ್ನು ಪಾಲಿಸುತ್ತಿದ್ದೆವು. ಆದರೆ, ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಆದರೂ ಅನೇಕ ಷರತ್ತುಗಳನ್ನು ವಿಧಿಸಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರದ ವಿವಿಧ ಗಣೇಶೋತ್ಸವ ಸಮಿತಿಗಳು, ಬಿಬಿಎಂಪಿ ಕೇಂದ್ರ ಕಚೇರಿಯ ಆವರಣಕ್ಕೇ ಗಣೇಶ ಮೂರ್ತಿಗಳನ್ನು ತಂದು ಪ್ರತಿಭಟನೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>