‘ವಾರ್ಡ್ಗೆ ಒಂದೇ ಗಣೇಶ ಮೂರ್ತಿ ಸ್ಥಾಪನೆ ಮಾಡಬೇಕು, ನಾಲ್ಕು ಅಡಿಗಿಂತ ಎತ್ತರ ಇರಬಾರದು, ಮೂರು ದಿನ ಮಾತ್ರ ಉತ್ಸವ ನಡೆಯಬೇಕು ಎಂಬ ಷರತ್ತುಗಳನ್ನು ವಿಧಿಸುವ ಮೂಲಕ ಹಬ್ಬದ ಆಚರಣೆಗೆ ಅಡ್ಡಿ ಮಾಡಲಾಗುತ್ತಿದೆ. ಈ ನಿರ್ಬಂಧಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜು ಒತ್ತಾಯಿಸಿದರು.