‘ತಮ್ಮದೇ ತಂಡ ಕಟ್ಟಿಕೊಂಡಿದ್ದ ಬಾಲಕರು, ಠಾಣೆ ವ್ಯಾಪ್ತಿಯಲ್ಲಿ ನಿತ್ಯವೂ ರಾತ್ರಿ ಸುತ್ತಾಡುತ್ತಿದ್ದರು. ಮಾರಕಾಸ್ತ್ರ ಹಿಡಿದು ಜನರನ್ನು ಬೆದರಿಸುತ್ತಿದ್ದರು. ದಾರಿಹೋಕರನ್ನು ಹಾಗೂ ಅಂಗಡಿಗಳಿಗೆ ನುಗ್ಗಿ ಸುಲಿಗೆ ಮಾಡುತ್ತಿದ್ದರು. ಈ ಬಗ್ಗೆ ಸಾರ್ವಜನಿಕರು ಠಾಣೆಗೆ ಮಾಹಿತಿ ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.