‘ಆರೋಪಿಗಳು ಒಡಿಶಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು ಹಾಗೂ ಕೆಲ ಕಾರ್ಮಿಕರು ಗಾಂಜಾ ಖರೀದಿಸುತ್ತಿದ್ದರು. ಬಂಧಿತ ಆರೋಪಿ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಾದಿಕ್ ತಂದೆ ಅಮೀರ್ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ’ ಎಂದೂ ಪೊಲೀಸರು ಹೇಳಿದರು.