‘ನಾಗರಬಾವಿ ಎರಡನೇ ಹಂತದ ಕೊಟ್ಟಿಗೆಪಾಳ್ಯ–ಕೆಂಗೇರಿ ನಡುವಿನ ರಸ್ತೆಯಲ್ಲಿ ಮರಳು ಸಂಗ್ರಹ ಘಟಕವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದೇ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿಗಳು, ಗಾಂಜಾ ಪೊಟ್ಟಣಗಳನ್ನು ಮಾರುತ್ತಿದ್ದರು. ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದೂ ತಿಳಿಸಿದರು.