‘ಸಂಧಾನ ಸಭೆಗಳಲ್ಲಿ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿದೆ. ಆದರೆ, ಸಂಘದ ಪ್ರಮುಖ ಬೇಡಿಕೆ ಈಡೇರಿಸುವ ಬಗ್ಗೆ ನಿಗಮದ ಪ್ರತಿನಿಧಿಗಳಿಂದ ಯಾವುದೇ ಖಚಿತ ಭರವಸೆ ಸಿಕ್ಕಿಲ್ಲ. ಈ ಸಭೆಗಳಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ನಿಗಮವು ಕೈಗೊಳ್ಳುವ ನಿರ್ಧಾರವನ್ನು ನೇರವಾಗಿ ಹೈಕೋರ್ಟ್ಗೆ ತಿಳಿಸುತ್ತೇವೆ ಎಂದು ಆಡಳಿತ ಮಂಡಳಿ ಪ್ರತಿನಿಧಿಗಳು ತಿಳಿಸಿದ್ದಾರೆ. ಆದರೆ, ಹೈಕೋರ್ಟ್ ಆ ರೀತಿ ಆದೇಶ ಮಾಡಿರಲಿಲ್ಲ’ ಎಂದು ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು.