<p>ಪ್ರಜಾವಾಣಿ ವಾರ್ತೆ</p>.<p><strong>ಬೆಂಗಳೂರು</strong>: ಆಂಧ್ರಪ್ರದೇಶದಿಂದ ನಗರಕ್ಕೆ ಕ್ವಿಂಟಲ್ಗೂ ಅಧಿಕ ಗಾಂಜಾ ತಂದು ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ನಗರದ ಎನ್ಡಿಪಿಎಸ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.</p>.<p>ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಸೀಲಮ್ ನಾಗವೆಂಕಟ ಸಾಯಿಚರಣ್ (29) ಮತ್ತು ವಿಜಯವಾಡ ಮೂಲದ ಜಗನ್ನಾಥನ್ ವಿಕಾಸ್ ಮಿಶ್ರಾ (30) ಶಿಕ್ಷೆಗೆ ಗುರಿಯಾದವರು.</p>.<p>ಸುದ್ದಗುಂಟೆ ಪಾಳ್ಯದ ಕೆಇಬಿ ಪಾರ್ಕ್ ಸಮೀಪ 2021ರ ಏಪ್ರಿಲ್ 12ರಂದು ಕಾರಿನಲ್ಲಿ ಗಾಂಜಾ ಸಾಗಣೆಯ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ, ಕಾರು ಜಪ್ತಿ ಮಾಡಿ ಆರೋಪಿಗಳನ್ನು ಬಂಧಿಸಿದ್ದರು. ಕಾರು ಪರಿಶೀಲನೆ ವೇಳೆ 114 ಕೆ.ಜಿ. ಗಾಂಜಾ ಪತ್ತೆಯಾಗಿತ್ತು.</p>.<p>ಪ್ರಕರಣದ ತನಿಖೆ ನಡೆಸಿದ ಇನ್ಸ್ಪೆಕ್ಟರ್ ಡಿ.ಎನ್.ನಟರಾಜ್ ನೇತೃತ್ವದ ತಂಡ, ಆರೋಪಿಗಳ ವಿರುದ್ಧ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ತಡೆ ಕಾಯ್ದೆ (ಎನ್ಡಿಪಿಎಸ್) ಅನ್ವಯ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.<p>ನ್ಯಾಯಾಧೀಶರಾದ ಲತಾ ಅವರು ಪ್ರಾಸಿಕ್ಯೂಷನ್ ವಾದ ಮತ್ತು ಸಾಕ್ಷ್ಯಾಧಾರಗಳನ್ನು ಪುರಸ್ಕರಿಸಿ ಅಪರಾಧಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ.</p>.<p>‘ಆರೋಪಿಗಳು ನಗರಕ್ಕೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಕುರಿತು ಪ್ರಾಸಿಕ್ಯೂಷನ್ ಪ್ರಬಲ ಸಾಕ್ಷ್ಯಾಧಾರ ಸಂಗ್ರಹಿಸಿತ್ತು. ಏಳು ಮಂದಿ ಸಾಕ್ಷಿಗಳು ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದರು. ಇದರಿಂದಾಗಿ ಇಬ್ಬರನ್ನೂ ಶಿಕ್ಷೆಗೆ ಗುರಿಪಡಿಸಲು ಸಾಧ್ಯವಾಯಿತು’ ಎಂದು ಸರ್ಕಾರಿ ಅಭಿಯೋಜಕ ಕೆ.ವಿ.ಅಶ್ವತ್ಥನಾರಾಯಣ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಬೆಂಗಳೂರು</strong>: ಆಂಧ್ರಪ್ರದೇಶದಿಂದ ನಗರಕ್ಕೆ ಕ್ವಿಂಟಲ್ಗೂ ಅಧಿಕ ಗಾಂಜಾ ತಂದು ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ನಗರದ ಎನ್ಡಿಪಿಎಸ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.</p>.<p>ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಸೀಲಮ್ ನಾಗವೆಂಕಟ ಸಾಯಿಚರಣ್ (29) ಮತ್ತು ವಿಜಯವಾಡ ಮೂಲದ ಜಗನ್ನಾಥನ್ ವಿಕಾಸ್ ಮಿಶ್ರಾ (30) ಶಿಕ್ಷೆಗೆ ಗುರಿಯಾದವರು.</p>.<p>ಸುದ್ದಗುಂಟೆ ಪಾಳ್ಯದ ಕೆಇಬಿ ಪಾರ್ಕ್ ಸಮೀಪ 2021ರ ಏಪ್ರಿಲ್ 12ರಂದು ಕಾರಿನಲ್ಲಿ ಗಾಂಜಾ ಸಾಗಣೆಯ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ, ಕಾರು ಜಪ್ತಿ ಮಾಡಿ ಆರೋಪಿಗಳನ್ನು ಬಂಧಿಸಿದ್ದರು. ಕಾರು ಪರಿಶೀಲನೆ ವೇಳೆ 114 ಕೆ.ಜಿ. ಗಾಂಜಾ ಪತ್ತೆಯಾಗಿತ್ತು.</p>.<p>ಪ್ರಕರಣದ ತನಿಖೆ ನಡೆಸಿದ ಇನ್ಸ್ಪೆಕ್ಟರ್ ಡಿ.ಎನ್.ನಟರಾಜ್ ನೇತೃತ್ವದ ತಂಡ, ಆರೋಪಿಗಳ ವಿರುದ್ಧ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ತಡೆ ಕಾಯ್ದೆ (ಎನ್ಡಿಪಿಎಸ್) ಅನ್ವಯ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.<p>ನ್ಯಾಯಾಧೀಶರಾದ ಲತಾ ಅವರು ಪ್ರಾಸಿಕ್ಯೂಷನ್ ವಾದ ಮತ್ತು ಸಾಕ್ಷ್ಯಾಧಾರಗಳನ್ನು ಪುರಸ್ಕರಿಸಿ ಅಪರಾಧಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ.</p>.<p>‘ಆರೋಪಿಗಳು ನಗರಕ್ಕೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಕುರಿತು ಪ್ರಾಸಿಕ್ಯೂಷನ್ ಪ್ರಬಲ ಸಾಕ್ಷ್ಯಾಧಾರ ಸಂಗ್ರಹಿಸಿತ್ತು. ಏಳು ಮಂದಿ ಸಾಕ್ಷಿಗಳು ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದರು. ಇದರಿಂದಾಗಿ ಇಬ್ಬರನ್ನೂ ಶಿಕ್ಷೆಗೆ ಗುರಿಪಡಿಸಲು ಸಾಧ್ಯವಾಯಿತು’ ಎಂದು ಸರ್ಕಾರಿ ಅಭಿಯೋಜಕ ಕೆ.ವಿ.ಅಶ್ವತ್ಥನಾರಾಯಣ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>