ಈ ವೇಳೆ ಮಾತನಾಡಿದ ಸಮಿತಿಯ ಬೆಂಗಳೂರು ನಗರ ಜಿಲ್ಲಾ ಸಂಯೋಜಕ ಎಂ.ರಮೇಶ್, ’ಉದ್ದೇಶಿತ ಬಡಾವಣೆಗಾಗಿ 17 ಗ್ರಾಮಗಳ 3500 ಎಕರೆ ಭೂಮಿಯನ್ನು ವಶಪಡಿಸಿಕೊಂಡಿರುವ ಬಿಡಿಎ, ಸಂತ್ರಸ್ತರಿಗೆ ಪರಿಹಾರ ನೀಡದೆ ಸತಾಯಿಸುತ್ತಿದೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ, ನಾಲ್ಕು ತಿಂಗಳಿನಿಂದ ಹೋರಾಟ ನಡೆಸಲಾಗುತ್ತಿದೆ. ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ದೂರಿದರು.