<p><strong>ನೆಲಮಂಗಲ:</strong> ಮಾದನಾಯಕನಹಳ್ಳಿಯಲ್ಲಿ ಶುಕ್ರವಾರ ಬೆಳಿಗ್ಗೆ ವೃದ್ದರೊಬ್ಬರ ಕತ್ತು ಸೀಳಿ ಕೊಲೆ ಮಾಡಲಾಗಿದೆ.</p>.<p>ಮಾದನಾಯಕನಹಳ್ಳಿ ನಿವಾಸಿ ಸಿದ್ದಪ್ಪ(70) ಕೊಲೆಯಾದವರು.</p>.<p>ಕೃತ್ಯ ಎಸಗಿದ ಆರೋಪದ ಅಡಿ ಶಿರಾದ ಪುನೀತ್(22) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದಪ್ಪ, ಕೆಲವು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಅವರಿಗೆ ಗುಟ್ಕಾ ಜಗಿಯುವ ಅಭ್ಯಾಸ ಇತ್ತು. ಗುಟ್ಕಾ ಜಗಿದ ಮೇಲೆ ರಸ್ತೆಯಲ್ಲಿ ಉಗುಳುತ್ತಿದ್ದರು. ಅಲ್ಲದೇ ಕಸವನ್ನು ರಸ್ತೆ ಬದಿಯಲ್ಲಿ ಎಸೆಯುತ್ತಿದ್ದರು ಎನ್ನಲಾಗಿದೆ.</p>.<p>ವಶಕ್ಕೆ ಪಡೆದ ವ್ಯಕ್ತಿ ಹಾಗೂ ಕೊಲೆಯಾದ ವೃದ್ಧ ಅಕ್ಕಪಕ್ಕದ ನಿವಾಸಿಗಳು. ಗುಟ್ಕಾ ಜಗಿದು ಎಲ್ಲೆಂದರಲ್ಲಿ ಉಗಿಯುತ್ತಿದ್ದರು ಹಾಗೂ ಕಸ ಎಸೆಯುತ್ತಿದ್ದರು ಎನ್ನುವ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆಯುತ್ತಿತ್ತು. ಶುಕ್ರವಾರ ಬೆಳಿಗ್ಗೆಯೂ ಗಲಾಟೆ ನಡೆದು, ಕೊಲೆ ಮಾಡಲಾಗಿದೆ ಎಂಬ ಆರೋಪವಿದೆ.</p>.<p>‘ಸಿಸಿ ಟಿ.ವಿ ಕ್ಯಾಮೆರಾದ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯ ಎಸಗಿದ್ದಕ್ಕೆ ಪೂರಕವಾದ ಸಾಕ್ಷ್ಯಾಧಾರಗಳು ಲಭಿಸಿದರೆ ಆರೋಪಿಯನ್ನು ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಮಾದನಾಯಕನಹಳ್ಳಿಯಲ್ಲಿ ಶುಕ್ರವಾರ ಬೆಳಿಗ್ಗೆ ವೃದ್ದರೊಬ್ಬರ ಕತ್ತು ಸೀಳಿ ಕೊಲೆ ಮಾಡಲಾಗಿದೆ.</p>.<p>ಮಾದನಾಯಕನಹಳ್ಳಿ ನಿವಾಸಿ ಸಿದ್ದಪ್ಪ(70) ಕೊಲೆಯಾದವರು.</p>.<p>ಕೃತ್ಯ ಎಸಗಿದ ಆರೋಪದ ಅಡಿ ಶಿರಾದ ಪುನೀತ್(22) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದಪ್ಪ, ಕೆಲವು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಅವರಿಗೆ ಗುಟ್ಕಾ ಜಗಿಯುವ ಅಭ್ಯಾಸ ಇತ್ತು. ಗುಟ್ಕಾ ಜಗಿದ ಮೇಲೆ ರಸ್ತೆಯಲ್ಲಿ ಉಗುಳುತ್ತಿದ್ದರು. ಅಲ್ಲದೇ ಕಸವನ್ನು ರಸ್ತೆ ಬದಿಯಲ್ಲಿ ಎಸೆಯುತ್ತಿದ್ದರು ಎನ್ನಲಾಗಿದೆ.</p>.<p>ವಶಕ್ಕೆ ಪಡೆದ ವ್ಯಕ್ತಿ ಹಾಗೂ ಕೊಲೆಯಾದ ವೃದ್ಧ ಅಕ್ಕಪಕ್ಕದ ನಿವಾಸಿಗಳು. ಗುಟ್ಕಾ ಜಗಿದು ಎಲ್ಲೆಂದರಲ್ಲಿ ಉಗಿಯುತ್ತಿದ್ದರು ಹಾಗೂ ಕಸ ಎಸೆಯುತ್ತಿದ್ದರು ಎನ್ನುವ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆಯುತ್ತಿತ್ತು. ಶುಕ್ರವಾರ ಬೆಳಿಗ್ಗೆಯೂ ಗಲಾಟೆ ನಡೆದು, ಕೊಲೆ ಮಾಡಲಾಗಿದೆ ಎಂಬ ಆರೋಪವಿದೆ.</p>.<p>‘ಸಿಸಿ ಟಿ.ವಿ ಕ್ಯಾಮೆರಾದ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯ ಎಸಗಿದ್ದಕ್ಕೆ ಪೂರಕವಾದ ಸಾಕ್ಷ್ಯಾಧಾರಗಳು ಲಭಿಸಿದರೆ ಆರೋಪಿಯನ್ನು ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>