ಕಸ ವಿಲೇವಾರಿಯನ್ನೂ ಸ್ಥಗಿತಗೊಳಿಸಿದ್ದರು. ಇದರಿಂದಾಗಿ ನಗರದಲ್ಲಿ ಎಲ್ಲೆಂದರಲ್ಲಿ ಕಸ ರಾಶಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಶನಿವಾರ ಬೆಳಿಗ್ಗೆ ಕ್ರಿಯಾ ಸಮಿತಿ ಪದಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಜತೆ ಗೌರವ್ ಗುಪ್ತ ಅವರು ಸಭೆ ನಡೆಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.ಮುಖ್ಯ ಆಯುಕ್ತರ ಮನವಿ ಪರಿಗಣಿಸಿದ ಗುತ್ತಿಗೆದಾರರು, ಶನಿವಾರ ಮಾಧ್ಯಾಹ್ನದಿಂದಲೇ ಕಸ ವಿಲೇವಾರಿ ಕಾರ್ಯ ಆರಂಭಿಸಿದರು.ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದೇವೆ’ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್.ಎನ್. ಬಾಲಸುಬ್ರಹ್ಮಣ್ಯ ಹೇಳಿದರು.