<p><strong>ಪೀಣ್ಯ ದಾಸರಹಳ್ಳಿ:</strong> ‘ಈ ಭಾಗದಲ್ಲಿ ಕಸದ ಸಮಸ್ಯೆಯಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಮನೆ ಹತ್ತಿರ ಬರುವ ಟಿಪ್ಪರ್ ವಾಹನಗಳಿಗೆ ಹಸಿ ಮತ್ತು ಒಣ ಕಸ ವಿಂಗಡಿಸಿ, ಹಾಕಿ ಸ್ವಚ್ಛತೆ ಕಾಪಾಡಬೇಕು’ ಎಂದು ಶಾಸಕ ಎಸ್.ಮುನಿರಾಜು ಮನವಿ ಮಾಡಿದರು.</p>.<p>ಚಿಕ್ಕಬಾಣಾವರ ಪುರಸಭೆಯ 6 ಮಿನಿ ಟಿಪ್ಪರ್ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಚಿಕ್ಕಬಾಣಾವರ ಮುಖ್ಯ ಅಧಿಕಾರಿ ಎಚ್.ಎ.ಕುಮಾರ್ ಮಾತನಾಡಿ, ‘ಸ್ವಚ್ಛ ಭಾರತ ಅಭಿಯಾನ ಹಾಗೂ ಪುರಸಭೆ ಅನುದಾನದಲ್ಲಿ ಮೊದಲ ಬಾರಿಗೆ 6 ಮಿನಿ ಟಿಪ್ಪರ್ ಖರೀದಿಸಲಾಗಿದೆ. ಮನೆ ಮನೆಗೆ ಹೋಗಿ ಕಸ ಸಂಗ್ರಹಕ್ಕೆ ಟಿಪ್ಪರ್ ಬಳಸಲಾಗುತ್ತದೆ. ಒಂದೂವರೆ ಟನ್ ಕಸ ತುಂಬುಲು ಸಾಧ್ಯತೆಯಿರುವ ಎರಡು ಕಂಪಾರ್ಟ್ಮೆಂಟ್ ಹೊಂದಿದ್ದು, ಹಸಿ ಮತ್ತು ಒಣಕಸ ಸಂಗ್ರಹಿಸಬಹುದಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ವಿಂಗಡಣೆಯಾದ ಹಸಿ ಕಸವನ್ನು ನಗರಾಭಿವೃದ್ಧಿಯ ಸೂಚನೆಯಂತೆ ದಾಸರಹಳ್ಳಿ ಬಿಬಿಎಂಪಿಗೆ ಕಳುಹಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತೆ 3 ಆಟೊ ಟಿಪ್ಪರ್ ಬರಲಿದ್ದು ಟೆಂಡರ್ ಪ್ರಕ್ರಿಯೆ ಮುಗಿಯಲಿದೆ. ಒಟ್ಟು 9 ಗಾಡಿಗಳು ಲಭ್ಯವಾದಲ್ಲಿ ಎಲ್ಲಾ ಏರಿಯಾಗಳಲ್ಲಿ ಕಸ ಸಂಗ್ರಹಿಸಲು ಅನುಕೂಲವಾಗಲಿದೆ. ಒಂದು ದಿನಕ್ಕೆ ಕನಿಷ್ಠ 18 ಟನ್ ಕಸ ಚಿಕ್ಕಬಾಣಾವರ ಪುರಸಭೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುತ್ತದೆ. ಅದರಲ್ಲಿ 10 ಟನ್ ಕಸ ಮಾತ್ರ ವಿಲೇವಾರಿಯಾಗುತ್ತಿದೆ’ ಎಂದರು.</p>.<p>ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ, ಪರಿಸರ ಎಂಜಿನಿಯರ್ ಹರೀಶ್, ಬಿಜೆಪಿ ಮುಖಂಡರಾದ ಬಿ.ಎಂ.ಚಿಕ್ಕಣ್ಣ, ನವೀನ್, ಕಬೀರ್ ಅಹ್ಮದ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ‘ಈ ಭಾಗದಲ್ಲಿ ಕಸದ ಸಮಸ್ಯೆಯಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಮನೆ ಹತ್ತಿರ ಬರುವ ಟಿಪ್ಪರ್ ವಾಹನಗಳಿಗೆ ಹಸಿ ಮತ್ತು ಒಣ ಕಸ ವಿಂಗಡಿಸಿ, ಹಾಕಿ ಸ್ವಚ್ಛತೆ ಕಾಪಾಡಬೇಕು’ ಎಂದು ಶಾಸಕ ಎಸ್.ಮುನಿರಾಜು ಮನವಿ ಮಾಡಿದರು.</p>.<p>ಚಿಕ್ಕಬಾಣಾವರ ಪುರಸಭೆಯ 6 ಮಿನಿ ಟಿಪ್ಪರ್ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಚಿಕ್ಕಬಾಣಾವರ ಮುಖ್ಯ ಅಧಿಕಾರಿ ಎಚ್.ಎ.ಕುಮಾರ್ ಮಾತನಾಡಿ, ‘ಸ್ವಚ್ಛ ಭಾರತ ಅಭಿಯಾನ ಹಾಗೂ ಪುರಸಭೆ ಅನುದಾನದಲ್ಲಿ ಮೊದಲ ಬಾರಿಗೆ 6 ಮಿನಿ ಟಿಪ್ಪರ್ ಖರೀದಿಸಲಾಗಿದೆ. ಮನೆ ಮನೆಗೆ ಹೋಗಿ ಕಸ ಸಂಗ್ರಹಕ್ಕೆ ಟಿಪ್ಪರ್ ಬಳಸಲಾಗುತ್ತದೆ. ಒಂದೂವರೆ ಟನ್ ಕಸ ತುಂಬುಲು ಸಾಧ್ಯತೆಯಿರುವ ಎರಡು ಕಂಪಾರ್ಟ್ಮೆಂಟ್ ಹೊಂದಿದ್ದು, ಹಸಿ ಮತ್ತು ಒಣಕಸ ಸಂಗ್ರಹಿಸಬಹುದಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ವಿಂಗಡಣೆಯಾದ ಹಸಿ ಕಸವನ್ನು ನಗರಾಭಿವೃದ್ಧಿಯ ಸೂಚನೆಯಂತೆ ದಾಸರಹಳ್ಳಿ ಬಿಬಿಎಂಪಿಗೆ ಕಳುಹಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತೆ 3 ಆಟೊ ಟಿಪ್ಪರ್ ಬರಲಿದ್ದು ಟೆಂಡರ್ ಪ್ರಕ್ರಿಯೆ ಮುಗಿಯಲಿದೆ. ಒಟ್ಟು 9 ಗಾಡಿಗಳು ಲಭ್ಯವಾದಲ್ಲಿ ಎಲ್ಲಾ ಏರಿಯಾಗಳಲ್ಲಿ ಕಸ ಸಂಗ್ರಹಿಸಲು ಅನುಕೂಲವಾಗಲಿದೆ. ಒಂದು ದಿನಕ್ಕೆ ಕನಿಷ್ಠ 18 ಟನ್ ಕಸ ಚಿಕ್ಕಬಾಣಾವರ ಪುರಸಭೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುತ್ತದೆ. ಅದರಲ್ಲಿ 10 ಟನ್ ಕಸ ಮಾತ್ರ ವಿಲೇವಾರಿಯಾಗುತ್ತಿದೆ’ ಎಂದರು.</p>.<p>ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ, ಪರಿಸರ ಎಂಜಿನಿಯರ್ ಹರೀಶ್, ಬಿಜೆಪಿ ಮುಖಂಡರಾದ ಬಿ.ಎಂ.ಚಿಕ್ಕಣ್ಣ, ನವೀನ್, ಕಬೀರ್ ಅಹ್ಮದ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>