‘ವಿಶ್ವೇಶ್ವರಯ್ಯ ಲೇಔಟ್ ಬಿಡಿಎ ಅಭಿವೃದ್ಧಿಪಡಿಸಿರುವ ಬಡಾವಣೆ. ಅಲ್ಲೊಂದು ಇಲ್ಲೊಂದು ಮನೆಗಳಿವೆ. ಎಲ್ಲೆಲ್ಲಿ ಖಾಲಿ ಜಾಗವಿದೆಯೋ ಅಲ್ಲಿ ಕಸವನ್ನು ಸುರಿಯಲಾಗುತ್ತಿದೆ. ರಾಮಸಂದ್ರದಿಂದ ನಗರಕ್ಕೆ ಹೋಗುವ ಎಲ್ಲರೂ ಇಲ್ಲಿಯೇ ಕಸ ಎಸೆದು ಹೋಗುತ್ತಾರೆ. ಬಿಬಿಎಂಪಿ ಪೌರಕಾರ್ಮಿಕ ಸಿಬ್ಬಂದಿ ವಾರ ಅಥವಾ ಹದಿನೈದು ದಿನಕ್ಕೊಮ್ಮೆ ಬಂದು ಕಸ ಒಯ್ಯುತ್ತಾರೆ’ ಎಂದು ಸ್ಥಳೀಯರು ದೂರುತ್ತಾರೆ.