ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ನಿರ್ವಹಣೆ ಇಲ್ಲದೆ ದುರ್ನಾತ ಬೀರುವ ಕೆ.ಆರ್‌. ಪುರ ಮಾರುಕಟ್ಟೆ

ಮಧ್ಯರಾತ್ರಿಯಲ್ಲಿ ಸುಂಕ ವಸೂಲಿಗಿಳಿಯುವ ಮಧ್ಯವರ್ತಿಗಳು: ಬೇಸತ್ತ ರೈತರು,
Published : 15 ಸೆಪ್ಟೆಂಬರ್ 2023, 23:30 IST
Last Updated : 15 ಸೆಪ್ಟೆಂಬರ್ 2023, 23:30 IST
ಫಾಲೋ ಮಾಡಿ
Comments
ಎಲ್ಲೆಂದರಲ್ಲಿ ರಾಶಿ ಬಿದ್ದಿರುವ ಹಸಿ ತ್ಯಾಜ್ಯ
ಎಲ್ಲೆಂದರಲ್ಲಿ ರಾಶಿ ಬಿದ್ದಿರುವ ಹಸಿ ತ್ಯಾಜ್ಯ
ತ್ಯಾಜ್ಯ ನಿರ್ವಹಣೆ ಮಾಡದೇ ಹಾಗೆ ಬಿಟ್ಟಿರುವುದು
ತ್ಯಾಜ್ಯ ನಿರ್ವಹಣೆ ಮಾಡದೇ ಹಾಗೆ ಬಿಟ್ಟಿರುವುದು
ಬಿಡಾಡಿ ದನಗಳ ಹಾವಳಿ
ಬಿಡಾಡಿ ದನಗಳ ಹಾವಳಿ
ಹಬ್ಬ ಹರಿದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ
ಹಬ್ಬ ಹರಿದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ
ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾಪಾರ ಮಾಡುವ ಹೂವಿನ ವ್ಯಾಪಾರಿಗಳು
ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾಪಾರ ಮಾಡುವ ಹೂವಿನ ವ್ಯಾಪಾರಿಗಳು
ಸರ್ಕಾರ ಕೆ.ಆರ್. ಪುರ ಮಾರುಕಟ್ಟೆಯನ್ನು ಹೊಸದಾಗಿ ನಿರ್ಮಿಸುವ ಯೋಜನೆ ಎತ್ತಿಕೊಂಡಿದೆ. ಕೆಳಗಡೆ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ. ಒಂದನೇ ಮಹಡಿಯಲ್ಲಿ ದಿನ ಪ್ರತಿ ನಡೆಯುವ ಮಾರುಕಟ್ಟೆ ಹಾಗೂ ನಂತರದ ಎರಡನೇ ಮಹಡಿಯಲ್ಲಿ ವಾರದ ಸಂತೆ ಮಾಡಲು ಯೋಜನೆ ಸಿದ್ಧಪಡಿಸಿಕೊಂಡಿದೆ. ಆದರೆ ಮಾರುಕಟ್ಟೆಯಲ್ಲಿನ ಕೆಲವು ವ್ಯಾಪಾರಿಗಳು ಯೋಜನೆಗೆ ಅಡ್ಡಿಪಡಿಸುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಸರ್ಕಾರದ ಯೋಜನೆಯ ಮೂಲಕ ಈ ಭಾಗದಲ್ಲಿ ನೂತನ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಸಂಚಾರ ದಟ್ಟಣೆ ಕಡಿಮೆ ಮಾಡಿ ರೈತರಿಗೆ ವ್ಯಾಪಾರಿಗಳಿಗೆ ಸಾರ್ವಜನಿಕರಿಗೆ ಅನುಕೂಲ ಮಾಡಬಹುದು.
– ಎಲೆ ಶ್ರೀನಿವಾಸ್‌ ಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ
‘ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ’ ಮಾರುಕಟ್ಟೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದೆ. ರಾತ್ರಿ ವೇಳೆ ನಾಯಿಗಳಿಂದಾಗಿ ಮಾರುಕಟ್ಟೆಯಲ್ಲಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ಇದೆ. ರಾತ್ರಿ ವೇಳೆ ಮಾರುಕಟ್ಟೆ ಸುತ್ತಮುತ್ತ ನಾಯಿಕೊಡೆಗಳಂತೆ ಹುಟ್ಟಿಕೊಳ್ಳುವ ಬೀದಿ ಬದಿಯ ತಳ್ಳುವ ಹೋಟೆಲ್‌ನಿಂದ ಮಾರುಕಟ್ಟೆಗೆ ಬರುವ ರೈತರು ವ್ಯಾಪಾರಿಗಳು ಹಾಗೂ ಸಾರ್ವಜನಿಕರು ತಿನ್ನುವ ಆಹಾರ ಪೊಟ್ಟಣಗಳನ್ನು ಎಲ್ಲೆಂದರಲ್ಲಿ ಬಿಸಾಡುವುದರಿಂದ ನಾಯಿಗಳು ಹೆಚ್ಚಾಗಿವೆ. ಸಾಕಷ್ಟು ಬಾರಿ ಸಾರ್ವಜನಿಕರನ್ನು ಅಟ್ಟಿಸಿಕೊಂಡು ಬಂದು ಕಚ್ಚಿವೆ. ಇದುವರೆಗೆ ಬಿಬಿಎಂಪಿ ಯಾವುದೇ ಕ್ರಮಕೈಗೊಂಡಿಲ್ಲ’ 
–ರಮೇಶ್‌ ರೈತ
ನಿತ್ಯ ಕಿರಿಕಿರಿ ಎನಿಸುವ ಟ್ರಾಫಿಕ್ ಸಮಸ್ಯೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕೆ.ಆರ್.ಪುರ ಮಾರುಕಟ್ಟೆ ನಿತ್ಯ ಟ್ರಾಫಿಕ್ ಕಿರಿಕಿರಿಯಿಂದಾಗಿ ಮಾರುಕಟ್ಟೆಗೆ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಹೊರ ರಾಜ್ಯ ಆಂಧ್ರಪ್ರದೇಶ ತಮಿಳುನಾಡು ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ಸಾವಿರಾರು ವಾಹನಗಳು ಇಲ್ಲಿಂದಲೇ ಸಂಚಾರ ಮಾಡುತ್ತಿವೆ. ಹೂವಿನ ಅಂಗಡಿಗಳು ಹೆದ್ದಾರಿ ಪಕ್ಕದ ಜಾಗಕ್ಕೆ ಸ್ಥಳಾಂತರಗೊಂಡಿವೆ. ವಿಶೇಷವಾಗಿ ಹಬ್ಬ ಹರಿದಿನಗಳಲ್ಲಿ ಸಂಚಾರ ದಟ್ಟಣೆ ಹೇಳತೀರದಾಗಿದೆ.
–ಕೆ.ಪಿ. ಕೃಷ್ಣ ಸ್ಥಳೀಯ ನಿವಾಸಿ
‘ಸ್ವಚ್ಛತೆ ಕಾಪಾಡಲಿ’ ಮಾರುಕಟ್ಟೆಯಲ್ಲಿ ಸ್ವಚ್ಛತೆ ಇಲ್ಲ. ಬಿಬಿಎಂಪಿ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ. ರೈತರಿಗೆ ಹೆಚ್ಚಿನ ಟೆಂಡರ್‌ಗಿಂತ ಅಧಿಕ ಸುಂಕ ವಿಧಿಸಲಾಗುತ್ತದೆ. ಸರಿಯಾದ ಜಾಗದಲ್ಲಿ ವ್ಯಾಪಾರ ಮಾಡಲು ರೈತರಿಗೆ ಮತ್ತು ವ್ಯಾಪಾರಿಗಳಿಗೆ ಸ್ಥಳವೂ ದೊರೆಯುತ್ತಿಲ್ಲ. ಮಾರುಕಟ್ಟೆಗೆ ಬರಲು ಸಮೀಪದಲ್ಲಿ ಇರುವ ಸ್ಕೈವಾಕ್‌ ನಿರ್ಮಿಸಲಾಗಿದೆ. ಆದರೆ ಇದು ಉಪಯೋಗಕ್ಕೂ ಬರುತ್ತಿಲ್ಲ. ವಾಹನ ನಿಲ್ದಾಣ ಮಾಡಲು ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಇರುವುದರಿಂದ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಲಾಗುತ್ತದೆ.
– ದಿಲೀಪ್‌ ಆಮ್‌ ಆದ್ಮಿ ಪಕ್ಷದ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT