ಇದೇ ರೀತಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹ ಫೆಬ್ರುವರಿ 22ರಂದು ಪ್ರಮಾಣಪತ್ರ ಸಲ್ಲಿಸಿತ್ತು. ಕೆರೆಗೆ ಒಳಚರಂಡಿ ನೀರು ಹರಿಯುತ್ತಿರುವುದು ಮತ್ತು ಘನತ್ಯಾಜ್ಯವನ್ನು ಕೆರೆ ಅಂಗಳದಲ್ಲಿ ಸುರಿಯುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ನೋಟಿಸ್ ನೀಡಿರುವುದಾಗಿ ತಿಳಿಸಿತ್ತು. ಜತೆಗೆ ನೀರಿನ ಗುಣಮಟ್ಟದ ಬಗ್ಗೆಯೂ ನಿಗಾವಹಿಸಲಾಗಿದೆ ಮತ್ತು ಮಾಲಿನ್ಯಕ್ಕೆ ಕಾರಣರಾಗಿರುವವರನ್ನು ಗುರುತಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು. ಆದರೆ, ಇದುವರೆಗೆ ವರದಿ ಸಲ್ಲಿಸಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.