<p><strong>ಬೆಂಗಳೂರು</strong>: ‘ನಗರದಲ್ಲಿ 35 ವರ್ಷಗಳ ಹಿಂದೆ ಸ್ಥಾಪನೆಯಾಗಿರುವ ಗಾರ್ಡನ್ ಸಿಟಿ ವಿಶ್ವವಿದ್ಯಾಲಯವು ಹಲವು ಸವಾಲುಗಳನ್ನು ಎದುರಿಸಿ ಗಟ್ಟಿಯಾಗಿ ನೆಲೆಯೂರಿದೆ’ ಎಂದು ಕುಲಾಧಿಪತಿ ವಿ.ಜಿ.ಜೋಸೆಫ್ ತಿಳಿಸಿದರು.</p>.<p>‘ಇಗ್ನೈಟ್ 35: ಎ ಇಯರ್ ಆಫ್ ಐಡಿಯಾಸ್’ ಶೀರ್ಷಿಕೆಯಡಿ ವಿಶ್ವವಿದ್ಯಾಲಯದ 35ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಹಲವು ಚಟುವಟಿಕೆಗಳು ಹಾಗೂ ಲಾಂಛನ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಾಲ್ಕೂವರೆ ದಶಕದಿಂದ ಶಿಕ್ಷಣ ಕ್ಷೇತ್ರದಲ್ಲಿ ನಾನು ಕೆಲಸ ಮಾಡುತ್ತಿರುವೆ. ಗಾರ್ಡನ್ ಸಿಟಿ ವಿಶ್ವವಿದ್ಯಾಲಯ ಸಣ್ಣದಾಗಿ ಆರಂಭಗೊಂಡಿತು. ಅರ್ಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದ್ದು, ಅದನ್ನು ಮುಂದುವರಿಸಲಿದೆ’ ಎಂದರು.</p>.<p>‘35ನೇ ವರ್ಷದ ನೆನಪಿನಲ್ಲಿ 35 ಸಾವಿರ ಸಸಿಗಳನ್ನು ನೆಟ್ಟು ಹಸಿರೀಕರಣಕ್ಕೆ ಒತ್ತು ನೀಡಲಾಗುತ್ತಿದೆ. ವರ್ಷವಿಡೀ ನಡೆಯುವ ಚಟುವಟಿಕೆಗಳಲ್ಲಿ 35 ಸಾಧಕರನ್ನು ಗೌರವಿಸಲಾಗುತ್ತದೆ’ ಎಂದು ಹೇಳಿದರು.</p>.<p>ಜಾದೂಗಾರ ಗೋಪಿನಾಥ್ ಮುತುಕಾಡ್ ಅವರು ‘ಕುತೂಹಲಿಯಾಗಿರು, ಸದಾ ಮುಂದೆ ಇರು, ಪ್ರತಿ ಯಶಸ್ಸಿನ ಹಿಂದಿನ ಗುಟ್ಟು ಹೇಗಿರಬೇಕು’ ಎನ್ನುವ ಬಗ್ಗೆ ಉಪನ್ಯಾಸ ನೀಡಿದರು. ‘ಜ್ಞಾನ, ನಾವೀನ್ಯ ಹಾಗೂ ಸಾಮಾಜಿಕ ಪರಿವರ್ತನೆಗಳತ್ತ ಶಿಕ್ಷಣ ಸಂಸ್ಥೆಗಳು ಗಮನ ನೀಡಬೇಕು. ಗಾರ್ಡನ್ ಸಿಟಿ ವಿಶ್ವವಿದ್ಯಾಲಯವು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಕುಲಪತಿ ಎಂ. ರಾಮಚಂದ್ರ ಗೌಡ ಮಾತನಾಡಿ, ‘1992ರ ಫೆಬ್ರವರಿ 27ರಂದು ಆರಂಭವಾದ ಗಾರ್ಡನ್ ಸಿಟಿ ಶಿಕ್ಷಣ ಸಂಸ್ಥೆ, ಮೂರೂವರೆ ದಶಕಗಳಿಗೂ ಹೆಚ್ಚು ಕಾಲ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಗರದಲ್ಲಿ 35 ವರ್ಷಗಳ ಹಿಂದೆ ಸ್ಥಾಪನೆಯಾಗಿರುವ ಗಾರ್ಡನ್ ಸಿಟಿ ವಿಶ್ವವಿದ್ಯಾಲಯವು ಹಲವು ಸವಾಲುಗಳನ್ನು ಎದುರಿಸಿ ಗಟ್ಟಿಯಾಗಿ ನೆಲೆಯೂರಿದೆ’ ಎಂದು ಕುಲಾಧಿಪತಿ ವಿ.ಜಿ.ಜೋಸೆಫ್ ತಿಳಿಸಿದರು.</p>.<p>‘ಇಗ್ನೈಟ್ 35: ಎ ಇಯರ್ ಆಫ್ ಐಡಿಯಾಸ್’ ಶೀರ್ಷಿಕೆಯಡಿ ವಿಶ್ವವಿದ್ಯಾಲಯದ 35ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಹಲವು ಚಟುವಟಿಕೆಗಳು ಹಾಗೂ ಲಾಂಛನ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಾಲ್ಕೂವರೆ ದಶಕದಿಂದ ಶಿಕ್ಷಣ ಕ್ಷೇತ್ರದಲ್ಲಿ ನಾನು ಕೆಲಸ ಮಾಡುತ್ತಿರುವೆ. ಗಾರ್ಡನ್ ಸಿಟಿ ವಿಶ್ವವಿದ್ಯಾಲಯ ಸಣ್ಣದಾಗಿ ಆರಂಭಗೊಂಡಿತು. ಅರ್ಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದ್ದು, ಅದನ್ನು ಮುಂದುವರಿಸಲಿದೆ’ ಎಂದರು.</p>.<p>‘35ನೇ ವರ್ಷದ ನೆನಪಿನಲ್ಲಿ 35 ಸಾವಿರ ಸಸಿಗಳನ್ನು ನೆಟ್ಟು ಹಸಿರೀಕರಣಕ್ಕೆ ಒತ್ತು ನೀಡಲಾಗುತ್ತಿದೆ. ವರ್ಷವಿಡೀ ನಡೆಯುವ ಚಟುವಟಿಕೆಗಳಲ್ಲಿ 35 ಸಾಧಕರನ್ನು ಗೌರವಿಸಲಾಗುತ್ತದೆ’ ಎಂದು ಹೇಳಿದರು.</p>.<p>ಜಾದೂಗಾರ ಗೋಪಿನಾಥ್ ಮುತುಕಾಡ್ ಅವರು ‘ಕುತೂಹಲಿಯಾಗಿರು, ಸದಾ ಮುಂದೆ ಇರು, ಪ್ರತಿ ಯಶಸ್ಸಿನ ಹಿಂದಿನ ಗುಟ್ಟು ಹೇಗಿರಬೇಕು’ ಎನ್ನುವ ಬಗ್ಗೆ ಉಪನ್ಯಾಸ ನೀಡಿದರು. ‘ಜ್ಞಾನ, ನಾವೀನ್ಯ ಹಾಗೂ ಸಾಮಾಜಿಕ ಪರಿವರ್ತನೆಗಳತ್ತ ಶಿಕ್ಷಣ ಸಂಸ್ಥೆಗಳು ಗಮನ ನೀಡಬೇಕು. ಗಾರ್ಡನ್ ಸಿಟಿ ವಿಶ್ವವಿದ್ಯಾಲಯವು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಕುಲಪತಿ ಎಂ. ರಾಮಚಂದ್ರ ಗೌಡ ಮಾತನಾಡಿ, ‘1992ರ ಫೆಬ್ರವರಿ 27ರಂದು ಆರಂಭವಾದ ಗಾರ್ಡನ್ ಸಿಟಿ ಶಿಕ್ಷಣ ಸಂಸ್ಥೆ, ಮೂರೂವರೆ ದಶಕಗಳಿಗೂ ಹೆಚ್ಚು ಕಾಲ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>