<p><strong>ಬೆಂಗಳೂರು:</strong> ಚಿಕ್ಕಪೇಟೆ ವಾರ್ಡ್ನ ತುಳಸಿತೋಪು ಉದ್ಯಾನದ ಗೇಟ್ ಬಿದ್ದು ಭದ್ರತಾ ಸಿಬ್ಬಂದಿಯ ತಲೆಗೆ ತೀವ್ರ ಪೆಟ್ಟಾಗಿದೆ.</p>.<p>ಶ್ರೀರಾಮ್ಪುರದಲ್ಲಿ ನೆಲಸಿರುವ ತಮಿಳುನಾಡಿನ ಪ್ರಭಾಕರ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.</p>.<p>ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಈ ಉದ್ಯಾನದಲ್ಲಿ ಕಸ ತುಂಬಿಕೊಂಡು ಹೋಗುವುದಕ್ಕೆ ಟಿಪ್ಪರ್ ಆಟೊ ಬಂದಿತು. ಆಟೊ ಒಳಗೆ ಹೋಗಲೆಂದು ಗೇಟ್ ಬೀಗ ತೆರೆಯಲಾಯಿತು. ಆಗ ಗೇಟ್ ಏಕಾಏಕಿ ಪ್ರಭಾಕರ್ ಮೇಲೆ ಬಿದ್ದಿದೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.</p>.<p>ಐದು ತಿಂಗಳ ಹಿಂದೆಯಷ್ಟೇ ಈ ಉದ್ಯಾನ ಅಭಿವೃದ್ಧಿ ಪಡಿಸಲಾಗಿತ್ತು. ಇತ್ತೀಚೆಗೆ ನಗರದಲ್ಲಿ ಸುರಿದ ಮಳೆಯಿಂದ ಮರದ ಕೊಂಬೆ ಬಿದ್ದು ಗೇಟ್ ಹಾಳಾಗಿತ್ತು. ಸರಿಪಡಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ರಮ ಕೈಗೊಂಡಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿಕ್ಕಪೇಟೆ ವಾರ್ಡ್ನ ತುಳಸಿತೋಪು ಉದ್ಯಾನದ ಗೇಟ್ ಬಿದ್ದು ಭದ್ರತಾ ಸಿಬ್ಬಂದಿಯ ತಲೆಗೆ ತೀವ್ರ ಪೆಟ್ಟಾಗಿದೆ.</p>.<p>ಶ್ರೀರಾಮ್ಪುರದಲ್ಲಿ ನೆಲಸಿರುವ ತಮಿಳುನಾಡಿನ ಪ್ರಭಾಕರ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.</p>.<p>ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಈ ಉದ್ಯಾನದಲ್ಲಿ ಕಸ ತುಂಬಿಕೊಂಡು ಹೋಗುವುದಕ್ಕೆ ಟಿಪ್ಪರ್ ಆಟೊ ಬಂದಿತು. ಆಟೊ ಒಳಗೆ ಹೋಗಲೆಂದು ಗೇಟ್ ಬೀಗ ತೆರೆಯಲಾಯಿತು. ಆಗ ಗೇಟ್ ಏಕಾಏಕಿ ಪ್ರಭಾಕರ್ ಮೇಲೆ ಬಿದ್ದಿದೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.</p>.<p>ಐದು ತಿಂಗಳ ಹಿಂದೆಯಷ್ಟೇ ಈ ಉದ್ಯಾನ ಅಭಿವೃದ್ಧಿ ಪಡಿಸಲಾಗಿತ್ತು. ಇತ್ತೀಚೆಗೆ ನಗರದಲ್ಲಿ ಸುರಿದ ಮಳೆಯಿಂದ ಮರದ ಕೊಂಬೆ ಬಿದ್ದು ಗೇಟ್ ಹಾಳಾಗಿತ್ತು. ಸರಿಪಡಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ರಮ ಕೈಗೊಂಡಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>