ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಗೋಕುಲದಾಸ್ ಕಂಪನಿಯ ಅಂಗ ಸಂಸ್ಥೆಯಾದ ಆಕ್ಟೀವ್ ನೀಟ್ ಕಂಪನಿ ಏಳೆಂಟು ವರ್ಷಗಳಿಂದ ಕಾರ್ಮಿಕರ ವೇತನದಲ್ಲಿ ಭವಿಷ್ಯ ನಿಧಿ ಕಂತುಗಳ ಹಣವನ್ನು ಕಡಿತ ಮಾಡಿಕೊಂಡಿತ್ತು. ಆದರೆ ಅದನ್ನು ಭವಿಷ್ಯ ನಿಧಿ ಖಾತೆಗೆ ಜಮೆ ಮಾಡಿಲ್ಲ ಎಂದು ನೌಕರರು ದೂರಿದರು. ಕಚೇರಿಯಲ್ಲಿ ಈ ಬಗ್ಗೆ ವಿಚಾರಿಸಿದಾಗ, ‘ಆಡಳಿತ ಮಂಡಳಿಯವರು ಇಂದು ನಾಳೆ ಎನ್ನುತ್ತಾ ಕಾಲಹರಣ ಮಾಡಿದ್ದಾರೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.