<p><strong>ಬೆಂಗಳೂರು: </strong>ಗಾರ್ಮೆಂಟ್ಸ್ ಕಾರ್ಖಾನೆಯೊಂದರ ಗುಣಮಟ್ಟ ತಪಾಸಣೆ ನೌಕರ ನವೀನ್ ಕುಮಾರ್ (31) ಎಂಬುವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಆಂಧ್ರಪ್ರದೇಶದ ನವೀನ್ಕುಮಾರ್, ತಂದೆ– ತಾಯಿ ಜೊತೆ 18 ವರ್ಷಗಳಿಂದ ನಗರದಲ್ಲಿ ವಾಸವಿದ್ದರು. ಅವರ ಆತ್ಮಹತ್ಯೆ ಬಗ್ಗೆ ತಂದೆಯಿಂದ ಹೇಳಿಕೆ ಪಡೆದು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಪೆಟ್ರೋಲ್ ಬಾಟಲಿ ಸಮೇತ ಪೀಣ್ಯ ಸರ್ಕಾರಿ ಐಟಿಐ ಕಾಲೇಜು ಆವರಣಕ್ಕೆ ಶುಕ್ರವಾರ ಮಧ್ಯಾಹ್ನ ನವೀನ್ ಬಂದಿದ್ದರು. ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡಿದ್ದರು.’</p>.<p>‘ರಕ್ಷಣೆಗೆ ಹೋಗಿದ್ದ ಸ್ಥಳೀಯರು, ಮೈಗೆ ಹತ್ತಿಕೊಂಡಿದ್ದ ಬೆಂಕಿ ಆರಿಸಿ ಇಎಸ್ಐ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ನವೀನ್ ಅವರನ್ನು ಸಪ್ತಗಿರಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಸಂಜೆ ನವೀನ್ ಅಸುನೀಗಿದರು’ ಎಂದೂ ತಿಳಿಸಿದರು.</p>.<p>‘ಎಡಗೈ ಸ್ವಾಧೀನ ಸಮಸ್ಯೆಯಿಂದ ಬಳಲುತ್ತಿದ್ದ ನವೀನ್, ಮಾನಸಿಕವಾಗಿ ಕುಗ್ಗಿದ್ದರು. ಮದುವೆಯಾಗಲು ಹುಡುಗಿ ಸಿಕ್ಕಿರಲಿಲ್ಲ. ತಂದೆಯೂ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಇದರಿಂದ ನೊಂದು ನವೀನ್ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗಾರ್ಮೆಂಟ್ಸ್ ಕಾರ್ಖಾನೆಯೊಂದರ ಗುಣಮಟ್ಟ ತಪಾಸಣೆ ನೌಕರ ನವೀನ್ ಕುಮಾರ್ (31) ಎಂಬುವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಆಂಧ್ರಪ್ರದೇಶದ ನವೀನ್ಕುಮಾರ್, ತಂದೆ– ತಾಯಿ ಜೊತೆ 18 ವರ್ಷಗಳಿಂದ ನಗರದಲ್ಲಿ ವಾಸವಿದ್ದರು. ಅವರ ಆತ್ಮಹತ್ಯೆ ಬಗ್ಗೆ ತಂದೆಯಿಂದ ಹೇಳಿಕೆ ಪಡೆದು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಪೆಟ್ರೋಲ್ ಬಾಟಲಿ ಸಮೇತ ಪೀಣ್ಯ ಸರ್ಕಾರಿ ಐಟಿಐ ಕಾಲೇಜು ಆವರಣಕ್ಕೆ ಶುಕ್ರವಾರ ಮಧ್ಯಾಹ್ನ ನವೀನ್ ಬಂದಿದ್ದರು. ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡಿದ್ದರು.’</p>.<p>‘ರಕ್ಷಣೆಗೆ ಹೋಗಿದ್ದ ಸ್ಥಳೀಯರು, ಮೈಗೆ ಹತ್ತಿಕೊಂಡಿದ್ದ ಬೆಂಕಿ ಆರಿಸಿ ಇಎಸ್ಐ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ನವೀನ್ ಅವರನ್ನು ಸಪ್ತಗಿರಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಸಂಜೆ ನವೀನ್ ಅಸುನೀಗಿದರು’ ಎಂದೂ ತಿಳಿಸಿದರು.</p>.<p>‘ಎಡಗೈ ಸ್ವಾಧೀನ ಸಮಸ್ಯೆಯಿಂದ ಬಳಲುತ್ತಿದ್ದ ನವೀನ್, ಮಾನಸಿಕವಾಗಿ ಕುಗ್ಗಿದ್ದರು. ಮದುವೆಯಾಗಲು ಹುಡುಗಿ ಸಿಕ್ಕಿರಲಿಲ್ಲ. ತಂದೆಯೂ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಇದರಿಂದ ನೊಂದು ನವೀನ್ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>