ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾರ್ಮೆಂಟ್ಸ್ ಕಂಪನಿ ವಿರುದ್ಧ ಕಾರ್ಮಿಕರ ಪ್ರತಿಭಟನೆ

Last Updated 4 ಫೆಬ್ರುವರಿ 2021, 18:09 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕ್ಲಾತಿಂ ಗಾರ್ಮೆಂಟ್ಸ್ ಕಂಪನಿಯ ವಿರುದ್ಧ ಕಾರ್ಮಿಕರು ಗುರುವಾರ ಪ್ರತಿಭಟನೆ ನಡೆಸಿದರು.

‘ಹತ್ತು ವರ್ಷದಿಂದ ಕೆಲಸ ಮಾಡಿದ್ದೇವೆ. ಕೆಲಸಕ್ಕೆ ರಾಜೀನಾಮೆ ನೀಡಿದ್ದೇವೆ. ನಮಗೆ ಬರಬೇಕಾದ ಭವಿಷ್ಯ ನಿಧಿ ಮತ್ತಿತರ ಹಣವನ್ನು ಕಂಪನಿಯವರು ನೀಡುತ್ತಿಲ್ಲ’ ಎಂದು ಪ್ರತಿಭಟನಾನಿರತ ಮಹಿಳೆ ಗೀತಾಬಾಯಿ ದೂರಿದರು.

'ಗರ್ಭಿಣಿಯಾಗಿದ್ದಾಗ ಕೆಲಸ ಬಿಟ್ಟಿದ್ದೆ. ಮತ್ತೆ ಆರು ತಿಂಗಳ ಮಗುವಿನೊಂದಿಗೆ ಬಂದಾಗ ಒಳಗೆ ಬಿಡದೆ ಗೇಟ್ ಹತ್ತಿರವೇ ಮಾತನಾಡಿಸಿ ಕಳಿಸಿದರು. ಕೆಲಸ ಬಿಟ್ಟು ಎರಡು ವರ್ಷವಾದರೂ ಬರಬೇಕಾದ ಹಣ ಬಂದಿಲ್ಲ’ ಎಂದು ಅವರು ಅಳಲು ತೋಡಿಕೊಂಡರು.

ಮತ್ತೊಬ್ಬ ಉದ್ಯೋಗಿ ಹೇಮಲತಾ, 'ನಾಲ್ಕು ವರ್ಷಗಳಿಂದ ಕೆಲಸ ಮಾಡಿದ್ದೇನೆ. ಈವರೆಗೂ ಪಿಎಫ್ ಹಣ ನೀಡುತ್ತಿಲ್ಲ’ ಎಂದು ದೂರಿದರು.

‘ಕಂಪನಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ 20 ದಿನದೊಳಗೆ ಸಮಸ್ಯೆ ಪರಿಹರಿಸಲಾಗುವುದು. ಪಿಎಫ್‌ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು’ ಎಂದು ಗಾರ್ಮೆಂಟ್ಸ್‌ನ ವ್ಯವಸ್ಥಾಪಕಿ ಪ್ರಿಯಾ ವೆಂಕಟೇಶ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT