ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪರ್ಕ ನೀಡದ ಗ್ಯಾಸ್‌ಪೈಪ್ ಒಡೆದು ಆತಂಕ ಸೃಷ್ಟಿ

Last Updated 4 ಫೆಬ್ರುವರಿ 2020, 18:16 IST
ಅಕ್ಷರ ಗಾತ್ರ

ಬೆಂಗಳೂರು: ಮಲ್ಲೇಶ್ವರದ ಎಂಟನೇ ಅಡ್ಡರಸ್ತೆಯಲ್ಲಿ ಇನ್ನೂ ಸಂಪರ್ಕ ನೀಡದ ಗ್ಯಾಸ್‌ಪೈಪ್ ಒಡೆದು ಮಂಗಳವಾರ ರಾತ್ರಿ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಯಿತು.

ಖಾಸಗಿ ಕಂಪನಿಯೊಂದು ಇಲ್ಲಿ ಗ್ಯಾಸ್ ಪೈಪ್‌ಲೈನ್ ಸಂಪರ್ಕ ಕಲ್ಪಿಸಲು ರಸ್ತೆ ಅಗೆಯುವ ಕಾಮಗಾರಿ ನಡೆಸುತ್ತಿದೆ. ಆಗ ಅಳವಡಿಸಲಾಗಿದ್ದ ಗ್ಯಾಸ್ ಪೈಪ್ ಲೈನ್ ಒಡೆದು ಅದರಲ್ಲಿದ್ದ ಗಾಳಿ ಹೊರಬಂದಿದ್ದು, ಸ್ಥಳಿಯರು ಆತಂಕಗೊಂಡಿದ್ದರು. ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದರು.

ಸ್ಥಳಕ್ಕೆ ಬಂದ ಗ್ಯಾಸ್ ಪೈಪ್ ಸಂಪರ್ಕ ಕಲ್ಪಿಸುವ ಸಿಬ್ಬಂದಿ ಪರಿಶೀಲನೆ ನಡೆಸಿ ಪೈಪ್ ಮುಚ್ಚಿದ್ದಾರೆ. ಅನಿಲ ಸಂಪರ್ಕ ಇನ್ನೂ ನೀಡದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಮಲ್ಲೇಶ್ವರಂ ಠಾಣೆ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT