<p><strong>ಬೆಂಗಳೂರು</strong>: ನಗರದ ವಿವಿಧೆಡೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಗಳ ಮೇಲೆ ದಾಳಿ ನಡೆಸಿದ ಕೇಂದ್ರ ಅಪರಾಧ ದಳದ (ಸಿಸಿಬಿ) ಪೊಲೀಸರು, ಆರು ಮಂದಿಯನ್ನು ಬಂಧಿಸಿ ₹ 3.73 ಲಕ್ಷ ಮೌಲ್ಯದ 384 ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಸಿದ್ದಾರ್ಥ್ ಲೇಔಟ್ನ ರಾಜು, ನಾಗರಬಾವಿಯ ಮಾರುತಿನಗರದ ಸಿ.ಎ. ಅಮರ್, ಹೆಗ್ಗನಹಳ್ಳಿಯ ಎಚ್. ಲಕ್ಷ್ಮಯ್ಯ, ಅನ್ನಪೂರ್ಣೇಶ್ವರಿನಗರದ ವಿನಯ್, ಆರ್.ಆರ್. ನಗರದ ಪ್ರಕಾಶ್, ರಾಜಗೋಪಾಲನಗರದ ತಿಮ್ಮಪ್ಪ ಬಂಧಿತರು. ಆರೋಪಿಗಳಿಂದ ರೀಫಿಲ್ಲಿಂಗ್ ರಾಡ್ಗಳು, ತೂಕದ ಯಂತ್ರಗಳು ಸೇರಿದಂತೆ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಪೀಣ್ಯ, ಕೆಂಗೇರಿ, ಕಾಮಾಕ್ಷಿಪಾಳ್ಯ, ವಿಜಯನಗರ, ಆರ್.ಆರ್. ನಗರ ಮತ್ತು ರಾಜಗೋಪಾಲನಗರದಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ.</p>.<p>‘ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಆರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಸಿಸಿಬಿಯ ಆರ್ಥಿಕ ಅಪರಾಧ ದಳ ಮತ್ತು ಸಂಘಟಿತ ಅಪರಾಧ ದಳ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದೆ’ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ವಿವಿಧೆಡೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಗಳ ಮೇಲೆ ದಾಳಿ ನಡೆಸಿದ ಕೇಂದ್ರ ಅಪರಾಧ ದಳದ (ಸಿಸಿಬಿ) ಪೊಲೀಸರು, ಆರು ಮಂದಿಯನ್ನು ಬಂಧಿಸಿ ₹ 3.73 ಲಕ್ಷ ಮೌಲ್ಯದ 384 ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಸಿದ್ದಾರ್ಥ್ ಲೇಔಟ್ನ ರಾಜು, ನಾಗರಬಾವಿಯ ಮಾರುತಿನಗರದ ಸಿ.ಎ. ಅಮರ್, ಹೆಗ್ಗನಹಳ್ಳಿಯ ಎಚ್. ಲಕ್ಷ್ಮಯ್ಯ, ಅನ್ನಪೂರ್ಣೇಶ್ವರಿನಗರದ ವಿನಯ್, ಆರ್.ಆರ್. ನಗರದ ಪ್ರಕಾಶ್, ರಾಜಗೋಪಾಲನಗರದ ತಿಮ್ಮಪ್ಪ ಬಂಧಿತರು. ಆರೋಪಿಗಳಿಂದ ರೀಫಿಲ್ಲಿಂಗ್ ರಾಡ್ಗಳು, ತೂಕದ ಯಂತ್ರಗಳು ಸೇರಿದಂತೆ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಪೀಣ್ಯ, ಕೆಂಗೇರಿ, ಕಾಮಾಕ್ಷಿಪಾಳ್ಯ, ವಿಜಯನಗರ, ಆರ್.ಆರ್. ನಗರ ಮತ್ತು ರಾಜಗೋಪಾಲನಗರದಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ.</p>.<p>‘ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಆರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಸಿಸಿಬಿಯ ಆರ್ಥಿಕ ಅಪರಾಧ ದಳ ಮತ್ತು ಸಂಘಟಿತ ಅಪರಾಧ ದಳ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದೆ’ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>