<p><strong>ಬೆಂಗಳೂರು</strong>: ಮಲ್ಲೇಶ್ವರದ ರಾಜಾಶಂಕರ್ ಆಟದ ಮೈದಾನದಲ್ಲಿ ಗೇಟ್ ಅಳವಡಿಸಿರುವ ಕಾಮಗಾರಿ ಗುಣಮಟ್ಟದ ಕುರಿತು ತನಿಖೆ ನಡೆಸಲು ಬಿಬಿಎಂಪಿಯ ಮೂವರು ಮುಖ್ಯ ಎಂಜಿನಿಯರ್ಗಳ ಸಮಿತಿಯನ್ನು ರಚಿಸಲಾಗಿದೆ.</p>.<p>‘ಮೈದಾನದಲ್ಲಿ ಆಟವಾಡಲು ತೆರಳಿದ್ದ ಬಾಲಕ, ಗೇಟ್ ಬಿದ್ದು ಮೃತಪಟ್ಟಿದ್ದಾನೆ. ಈ ಮೈದಾನದಲ್ಲಿ ಗೇಟ್ ಅಳವಡಿಕೆಯಲ್ಲಿ ಕಳಪೆ ಕಾಮಗಾರಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಬಗ್ಗೆ ತನಿಖೆ ನಡೆಸಿ, ಒಂದು ವಾರದಲ್ಲಿ ವರದಿ ಸಲ್ಲಿಸಬೇಕು’ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ಆದೇಶ ಹೊರಡಿಸಿದ್ದಾರೆ.</p>.<p>ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್ ವಿಜಯಕುಮಾರ್ ಹರಿದಾಸ್ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ತಾಂತ್ರಿಕ ಮತ್ತು ಜಾಗೃತ ಕೋಶದ (ಟಿವಿಸಿಸಿ) ಮುಖ್ಯ ಎಂಜಿನಿಯರ್ ವಿಶ್ವನಾಥ್, ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಎಂಜಿನಿಯರ್ ರಾಘವೇಂದ್ರ ಪ್ರಸಾದ್ ಸದಸ್ಯರಾಗಿದ್ದಾರೆ.</p>.<p>‘ಗೇಟ್ ಅಳವಡಿಕೆಯ ಕಾಮಗಾರಿ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ಕಳಪೆ ಕಾಮಗಾರಿಯಾಗಿದೆ ಎಂದು ಹಿಂದೆ ಯಾರಾದರೂ ದೂರಿದ್ದರೆ ಅದನ್ನು ಸಾಕ್ಷಿ ಸಹಿತ ಸಮಿತಿಗೆ ನೀಡಲಿ. ಅದರ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತುಷಾರ್ ಗಿರಿನಾಥ್ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಆರೋಪ: ‘ರಾಜಾಶಂಕರ್ ಆಟದ ಮೈದಾನದಲ್ಲಿನ ಗೇಟ್ ಸುರಕ್ಷಿತವಾಗಿಲ್ಲ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಪಾಲಿಕೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ’ ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಇಂಡಿಯಾ (ಕಮ್ಯೂನಿಸ್ಟ್) ಪದಾಧಿಕಾರಿಗಳು ಆರೋಪಿಸಿದ್ದಾರೆ. </p>.<p>ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಪತ್ರ ನೀಡಿರುವ ಬೆಂಗಳೂರು ಉತ್ತರ ಜಿಲ್ಲಾ ಸಮಿತಿ ಕಾರ್ಯದರ್ಶಿ ವಿ. ಜ್ಞಾನಮೂರ್ತಿ, ‘ಸುತ್ತಮುತ್ತಲಿನ ಬಡ ಹಾಗೂ ಕೆಳ ಮಧ್ಯಮ ವರ್ಗದ ಮಕ್ಕಳೇ ಹೆಚ್ಚು ಆಟವಾಡಲು ಬರುವ ಈ ಮೈದಾನದ ಸುರಕ್ಷತೆ ಬಗ್ಗೆ ಕಾಳಜಿ ವಹಿಸದಿರುವುದು ಪಾಲಿಕೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ. ದುರಂತಕ್ಕೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು. ನಗರದಲ್ಲಿರುವ ಎಲ್ಲಾ ಆಟದ ಮೈದಾನಗಳು ಮತ್ತು ಉದ್ಯಾನಗಳ ನಿರ್ವಹಣೆ ಸೂಕ್ತವಾಗಿರಬೇಕು. ಇಂಥ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಲ್ಲೇಶ್ವರದ ರಾಜಾಶಂಕರ್ ಆಟದ ಮೈದಾನದಲ್ಲಿ ಗೇಟ್ ಅಳವಡಿಸಿರುವ ಕಾಮಗಾರಿ ಗುಣಮಟ್ಟದ ಕುರಿತು ತನಿಖೆ ನಡೆಸಲು ಬಿಬಿಎಂಪಿಯ ಮೂವರು ಮುಖ್ಯ ಎಂಜಿನಿಯರ್ಗಳ ಸಮಿತಿಯನ್ನು ರಚಿಸಲಾಗಿದೆ.</p>.<p>‘ಮೈದಾನದಲ್ಲಿ ಆಟವಾಡಲು ತೆರಳಿದ್ದ ಬಾಲಕ, ಗೇಟ್ ಬಿದ್ದು ಮೃತಪಟ್ಟಿದ್ದಾನೆ. ಈ ಮೈದಾನದಲ್ಲಿ ಗೇಟ್ ಅಳವಡಿಕೆಯಲ್ಲಿ ಕಳಪೆ ಕಾಮಗಾರಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಬಗ್ಗೆ ತನಿಖೆ ನಡೆಸಿ, ಒಂದು ವಾರದಲ್ಲಿ ವರದಿ ಸಲ್ಲಿಸಬೇಕು’ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ಆದೇಶ ಹೊರಡಿಸಿದ್ದಾರೆ.</p>.<p>ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್ ವಿಜಯಕುಮಾರ್ ಹರಿದಾಸ್ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ತಾಂತ್ರಿಕ ಮತ್ತು ಜಾಗೃತ ಕೋಶದ (ಟಿವಿಸಿಸಿ) ಮುಖ್ಯ ಎಂಜಿನಿಯರ್ ವಿಶ್ವನಾಥ್, ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಎಂಜಿನಿಯರ್ ರಾಘವೇಂದ್ರ ಪ್ರಸಾದ್ ಸದಸ್ಯರಾಗಿದ್ದಾರೆ.</p>.<p>‘ಗೇಟ್ ಅಳವಡಿಕೆಯ ಕಾಮಗಾರಿ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ಕಳಪೆ ಕಾಮಗಾರಿಯಾಗಿದೆ ಎಂದು ಹಿಂದೆ ಯಾರಾದರೂ ದೂರಿದ್ದರೆ ಅದನ್ನು ಸಾಕ್ಷಿ ಸಹಿತ ಸಮಿತಿಗೆ ನೀಡಲಿ. ಅದರ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತುಷಾರ್ ಗಿರಿನಾಥ್ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಆರೋಪ: ‘ರಾಜಾಶಂಕರ್ ಆಟದ ಮೈದಾನದಲ್ಲಿನ ಗೇಟ್ ಸುರಕ್ಷಿತವಾಗಿಲ್ಲ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಪಾಲಿಕೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ’ ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಇಂಡಿಯಾ (ಕಮ್ಯೂನಿಸ್ಟ್) ಪದಾಧಿಕಾರಿಗಳು ಆರೋಪಿಸಿದ್ದಾರೆ. </p>.<p>ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಪತ್ರ ನೀಡಿರುವ ಬೆಂಗಳೂರು ಉತ್ತರ ಜಿಲ್ಲಾ ಸಮಿತಿ ಕಾರ್ಯದರ್ಶಿ ವಿ. ಜ್ಞಾನಮೂರ್ತಿ, ‘ಸುತ್ತಮುತ್ತಲಿನ ಬಡ ಹಾಗೂ ಕೆಳ ಮಧ್ಯಮ ವರ್ಗದ ಮಕ್ಕಳೇ ಹೆಚ್ಚು ಆಟವಾಡಲು ಬರುವ ಈ ಮೈದಾನದ ಸುರಕ್ಷತೆ ಬಗ್ಗೆ ಕಾಳಜಿ ವಹಿಸದಿರುವುದು ಪಾಲಿಕೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ. ದುರಂತಕ್ಕೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು. ನಗರದಲ್ಲಿರುವ ಎಲ್ಲಾ ಆಟದ ಮೈದಾನಗಳು ಮತ್ತು ಉದ್ಯಾನಗಳ ನಿರ್ವಹಣೆ ಸೂಕ್ತವಾಗಿರಬೇಕು. ಇಂಥ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>