<p><strong>ಬೆಂಗಳೂರು:</strong> ಪಾಲಿಕೆ ಸದಸ್ಯರ ಅವಧಿ ಮುಕ್ತಾಯವಾದ ನಂತರ ಸರ್ಕಾರದ ಆದೇಶದಂತೆ ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಐಎಎಸ್ ಹಿರಿಯ ಅಧಿಕಾರಿ ಗೌರವ ಗುಪ್ತ ಅಧಿಕಾರ ಸ್ವೀಕರಿಸಿದರು.</p>.<p>ಗೌರವ ಗುಪ್ತ ಅವರನ್ನುಆಯುಕ್ತ ಎನ್. ಮಂಜುನಾಥಪ್ರಸಾದ್ ಬರ ಮಾಡಿಕೊಂಡರು.</p>.<p>‘ಕೋವಿಡ್ ವಿಷಯವನ್ನು ಪಾಲಿಕೆ ಗಂಭೀರವಾಗಿ ಪರಿಗಣಿಸಿ ನಿಯಂತ್ರಣಕ್ಕಾಗಿ ಸಾಕಷ್ಟು ಕೆಲಸ ಮಾಡಿದೆ. ಆಗಿರುವ ಕೆಲಸದ ಬಗ್ಗೆ ಸಮೀಕ್ಷೆ ನಡೆಸಿ ಮುಂದೆ ಆಗಬೇಕಿರುವ ಕೆಲಸಗಳ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜತೆ ಚರ್ಚೆ ನಡೆಸುತ್ತೇನೆ’ ಎಂದರು.</p>.<p>‘ವಾರ್ಡ್ ಮಟ್ಟದಲ್ಲಿ ಜನರೊಟ್ಟಿಗಿದ್ದು ಕೆಲಸ ಮಾಡುತ್ತಿದ್ದ ಪಾಲಿಕೆ ಸದಸ್ಯರ ಅವಧಿ ಮುಗಿದಿದ್ದರೂ ಎಲ್ಲರ ಸಹಕಾರ ಪಡೆದು ಕಾರ್ಯನಿರ್ವಹಿಸುತ್ತೇವೆ. ಜನಪರವಾದ ಆಡಳಿತಕ್ಕೆ ಜನರ ಮತ್ತು ಜನಪ್ರತಿನಿಧಿಗಳ ಸಹಕಾರ ಮುಖ್ಯ’ ಎಂದು ಹೇಳಿದರು.</p>.<p>‘ಪ್ರತಿ ಮಳೆಗಾಲಕ್ಕೂ ಪಾಲಿಕೆ ಸಿದ್ಧವಾಗಿರುತ್ತದೆ. ಈಗ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಕೊರತೆಗಳಿದ್ದರೆ ಸರಿಪಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪಾಲಿಕೆ ಸದಸ್ಯರ ಅವಧಿ ಮುಕ್ತಾಯವಾದ ನಂತರ ಸರ್ಕಾರದ ಆದೇಶದಂತೆ ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಐಎಎಸ್ ಹಿರಿಯ ಅಧಿಕಾರಿ ಗೌರವ ಗುಪ್ತ ಅಧಿಕಾರ ಸ್ವೀಕರಿಸಿದರು.</p>.<p>ಗೌರವ ಗುಪ್ತ ಅವರನ್ನುಆಯುಕ್ತ ಎನ್. ಮಂಜುನಾಥಪ್ರಸಾದ್ ಬರ ಮಾಡಿಕೊಂಡರು.</p>.<p>‘ಕೋವಿಡ್ ವಿಷಯವನ್ನು ಪಾಲಿಕೆ ಗಂಭೀರವಾಗಿ ಪರಿಗಣಿಸಿ ನಿಯಂತ್ರಣಕ್ಕಾಗಿ ಸಾಕಷ್ಟು ಕೆಲಸ ಮಾಡಿದೆ. ಆಗಿರುವ ಕೆಲಸದ ಬಗ್ಗೆ ಸಮೀಕ್ಷೆ ನಡೆಸಿ ಮುಂದೆ ಆಗಬೇಕಿರುವ ಕೆಲಸಗಳ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜತೆ ಚರ್ಚೆ ನಡೆಸುತ್ತೇನೆ’ ಎಂದರು.</p>.<p>‘ವಾರ್ಡ್ ಮಟ್ಟದಲ್ಲಿ ಜನರೊಟ್ಟಿಗಿದ್ದು ಕೆಲಸ ಮಾಡುತ್ತಿದ್ದ ಪಾಲಿಕೆ ಸದಸ್ಯರ ಅವಧಿ ಮುಗಿದಿದ್ದರೂ ಎಲ್ಲರ ಸಹಕಾರ ಪಡೆದು ಕಾರ್ಯನಿರ್ವಹಿಸುತ್ತೇವೆ. ಜನಪರವಾದ ಆಡಳಿತಕ್ಕೆ ಜನರ ಮತ್ತು ಜನಪ್ರತಿನಿಧಿಗಳ ಸಹಕಾರ ಮುಖ್ಯ’ ಎಂದು ಹೇಳಿದರು.</p>.<p>‘ಪ್ರತಿ ಮಳೆಗಾಲಕ್ಕೂ ಪಾಲಿಕೆ ಸಿದ್ಧವಾಗಿರುತ್ತದೆ. ಈಗ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಕೊರತೆಗಳಿದ್ದರೆ ಸರಿಪಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>