ನಾವೇ ಕರ್ನಾಟಕ ಸಂಘಟನೆಯ ಅಧ್ಯಕ್ಷ ಪಾರ್ವತೀಶ ಬಿಳಿದಾಳೆ ಮಾತನಾಡಿ, ‘ಹಲವರು ‘ನಾನು ಗೌರಿ’ ಅಂತ ಹೇಳುತ್ತಾರೆ. ಆದರೆ, ಅವರ ರೀತಿ ಆಗುವುದು ಅಷ್ಟು ಸುಲಭವಲ್ಲ. ಕನ್ನಡ ಪತ್ರಿಕೋದ್ಯಮಕ್ಕೆ ಬಂದಾಗ ಅವರಿಗೆ ಕನ್ನಡ ಅಷ್ಟಾಗಿ ಬರುತ್ತಿರಲಿಲ್ಲ. ತಂದೆಯ ಹೆಸರು ಉಳಿಸಬೇಕು ಎಂಬ ಉದ್ದೇಶದಿಂದ ಕನ್ನಡವನ್ನು ಸರಿಯಾಗಿ ಕಲಿತು, ಪತ್ರಿಕೆ ಮುನ್ನಡೆಸಿದರು. ಸಾಮಾಜಿಕ ಚಳವಳಿಯಲ್ಲಿ ಪಾಲ್ಗೊಂಡು, ಇಲ್ಲಿನ ಜನರ ಮನಸ್ಸಿನಲ್ಲಿ ಉಳಿದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.