<p><strong>ಬೆಂಗಳೂರು</strong>: ಐದು ನಗರ ಪಾಲಿಕೆಗಳಲ್ಲಿ ರಸ್ತೆಗಳು ಹಾಗೂ ಬೃಹತ್ ನೀರುಗಾಲುವೆಗಳ ನಿರ್ವಹಣೆಗಾಗಿ ಕೂಡಲೇ ಗುತ್ತಿಗೆದಾರರನ್ನು ನೇಮಿಸಿಕೊಳ್ಳಬೇಕು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದರು.</p><p>ನಗರ ಪಾಲಿಕೆಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಆಯುಕ್ತರೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು, ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳಲ್ಲಿ ಕೇಂದ್ರೀಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ ನಿರ್ವಹಣಾ ತಂಡಗಳನ್ನು ರದ್ದುಪಡಿಸಬೇಕು. ಆಯಾ ಪಾಲಿಕೆಗಳ ವ್ಯಾಪ್ತಿಗೆ ಅನುಗುಣವಾಗಿ ಹೊಸ ಗುತ್ತಿಗೆದಾರರನ್ನು ನೇಮಿಸಿಕೊಳ್ಳಬೇಕು ಎಂದರು.</p><p>ರಸ್ತೆ ಮೂಲಸೌಕರ್ಯ, ಕಟ್ಟಡಗಳು, ಬೃಹತ್ ನೀರುಗಾಲುವೆ, ಕೆರೆಗಳು ಸೇರಿದಂತೆ ವಿವಿಧ ವಿಭಾಗಳ ಕೇಂದ್ರೀಕೃತ ಕಚೇರಿಗಳಿಂದ ಕಡತಗಳನ್ನು ಸಂಬಂಧಪಟ್ಟ ಆಯಾ ನಗರ ಪಾಲಿಕೆಗಳಿಗೆ ಹಸ್ತಾಂತರ ಮಾಡುವ ಸಲುವಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ, ತ್ವರಿತವಾಗಿ ಕಡತಗಳನ್ನು ವಿಲೇವಾರಿ ಮಾಡಬೇಕು ಎಂದರು.</p><p>ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸಲು ಸಹಾಯವಾಣಿ 1533 ಅನ್ನು ಜಿಬಿಎ ನಿರ್ವಹಿಸಲಿದೆ. ಐದು ನಗರ ಪಾಲಿಕೆಗಳ ಕೇಂದ್ರ ಕಚೇರಿ, ನಿಯಂತ್ರಣ ಕೊಠಡಿಗಳ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಬೇಕು ಎಂದು ಐದೂ ನಗರ ಪಾಲಿಕೆಗಳ ಆಡಳಿತಾಧಿಕಾರಿಯೂ ಆಗಿರುವ ಮಹೇಶ್ವರ್ ಸೂಚಿಸಿದರು.</p><p>ಆಯಾ ನಗರ ಪಾಲಿಕೆಗಳ ಕಚೇರಿಗಳಿಗಾಗಿ ಕಟ್ಟಡಗಳನ್ನು ನಿರ್ಮಿಸಲು ಸೂಕ್ತ ಖಾಲಿ ಜಾಗಗಳನ್ನು ಗುರುತಿಸಬೇಕು. ಆ ಬಳಿಕ ಲಭ್ಯವಿರುವ ಜಾಗ ಮತ್ತು ಕಚೇರಿ ಸ್ಥಳದ ಅವಶ್ಯಕತೆ ಆಧರಿಸಿ, ಹೊಸ ಪಾಲಿಕೆ ಕಟ್ಟಡಗಳ ವಿನ್ಯಾಸಗಳನ್ನು ಅಂತಿಮಗೊಳಿಸಬೇಕು ಎಂದರು.</p><p>ಜಿಬಿಎ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಸುಮಾರು 35,000 ಮಕ್ಕಳನ್ನು ಗುರುತಿಸಲಾಗಿದ್ದು, ಆಯಾ ನಗರ ಪಾಲಿಕೆಗಳಲ್ಲಿ ಎಷ್ಟು ಮಕ್ಕಳು ಬರಲಿದ್ದಾರೆ ಎಂಬ ಪಟ್ಟಿಯನ್ನು ನೀಡಲಾ<br>ಗುವುದು. ಅದಕ್ಕಾಗಿ ವಾರ್ಡ್ ಹಾಗೂ ಪಾಲಿಕೆಗಳಲ್ಲಿ ಕಾರ್ಯಪಡೆ ರಚಿಸಿ, ಎಲ್ಲರನ್ನು ಪುನಃ ಶಾಲೆಗೆ ಕಳುಹಿಸಲು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.</p><p>ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್, ಡಿ.ಎಸ್. ರಮೇಶ್, ಪೊಮ್ಮಲ ಸುನೀಲ್ ಕುಮಾರ್, ಕೆ.ಎನ್. ರಮೇಶ್ , ಡಾ. ಕೆ.ವಿ. ರಾಜೇಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐದು ನಗರ ಪಾಲಿಕೆಗಳಲ್ಲಿ ರಸ್ತೆಗಳು ಹಾಗೂ ಬೃಹತ್ ನೀರುಗಾಲುವೆಗಳ ನಿರ್ವಹಣೆಗಾಗಿ ಕೂಡಲೇ ಗುತ್ತಿಗೆದಾರರನ್ನು ನೇಮಿಸಿಕೊಳ್ಳಬೇಕು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದರು.</p><p>ನಗರ ಪಾಲಿಕೆಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಆಯುಕ್ತರೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು, ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳಲ್ಲಿ ಕೇಂದ್ರೀಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ ನಿರ್ವಹಣಾ ತಂಡಗಳನ್ನು ರದ್ದುಪಡಿಸಬೇಕು. ಆಯಾ ಪಾಲಿಕೆಗಳ ವ್ಯಾಪ್ತಿಗೆ ಅನುಗುಣವಾಗಿ ಹೊಸ ಗುತ್ತಿಗೆದಾರರನ್ನು ನೇಮಿಸಿಕೊಳ್ಳಬೇಕು ಎಂದರು.</p><p>ರಸ್ತೆ ಮೂಲಸೌಕರ್ಯ, ಕಟ್ಟಡಗಳು, ಬೃಹತ್ ನೀರುಗಾಲುವೆ, ಕೆರೆಗಳು ಸೇರಿದಂತೆ ವಿವಿಧ ವಿಭಾಗಳ ಕೇಂದ್ರೀಕೃತ ಕಚೇರಿಗಳಿಂದ ಕಡತಗಳನ್ನು ಸಂಬಂಧಪಟ್ಟ ಆಯಾ ನಗರ ಪಾಲಿಕೆಗಳಿಗೆ ಹಸ್ತಾಂತರ ಮಾಡುವ ಸಲುವಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ, ತ್ವರಿತವಾಗಿ ಕಡತಗಳನ್ನು ವಿಲೇವಾರಿ ಮಾಡಬೇಕು ಎಂದರು.</p><p>ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸಲು ಸಹಾಯವಾಣಿ 1533 ಅನ್ನು ಜಿಬಿಎ ನಿರ್ವಹಿಸಲಿದೆ. ಐದು ನಗರ ಪಾಲಿಕೆಗಳ ಕೇಂದ್ರ ಕಚೇರಿ, ನಿಯಂತ್ರಣ ಕೊಠಡಿಗಳ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಬೇಕು ಎಂದು ಐದೂ ನಗರ ಪಾಲಿಕೆಗಳ ಆಡಳಿತಾಧಿಕಾರಿಯೂ ಆಗಿರುವ ಮಹೇಶ್ವರ್ ಸೂಚಿಸಿದರು.</p><p>ಆಯಾ ನಗರ ಪಾಲಿಕೆಗಳ ಕಚೇರಿಗಳಿಗಾಗಿ ಕಟ್ಟಡಗಳನ್ನು ನಿರ್ಮಿಸಲು ಸೂಕ್ತ ಖಾಲಿ ಜಾಗಗಳನ್ನು ಗುರುತಿಸಬೇಕು. ಆ ಬಳಿಕ ಲಭ್ಯವಿರುವ ಜಾಗ ಮತ್ತು ಕಚೇರಿ ಸ್ಥಳದ ಅವಶ್ಯಕತೆ ಆಧರಿಸಿ, ಹೊಸ ಪಾಲಿಕೆ ಕಟ್ಟಡಗಳ ವಿನ್ಯಾಸಗಳನ್ನು ಅಂತಿಮಗೊಳಿಸಬೇಕು ಎಂದರು.</p><p>ಜಿಬಿಎ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಸುಮಾರು 35,000 ಮಕ್ಕಳನ್ನು ಗುರುತಿಸಲಾಗಿದ್ದು, ಆಯಾ ನಗರ ಪಾಲಿಕೆಗಳಲ್ಲಿ ಎಷ್ಟು ಮಕ್ಕಳು ಬರಲಿದ್ದಾರೆ ಎಂಬ ಪಟ್ಟಿಯನ್ನು ನೀಡಲಾ<br>ಗುವುದು. ಅದಕ್ಕಾಗಿ ವಾರ್ಡ್ ಹಾಗೂ ಪಾಲಿಕೆಗಳಲ್ಲಿ ಕಾರ್ಯಪಡೆ ರಚಿಸಿ, ಎಲ್ಲರನ್ನು ಪುನಃ ಶಾಲೆಗೆ ಕಳುಹಿಸಲು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.</p><p>ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್, ಡಿ.ಎಸ್. ರಮೇಶ್, ಪೊಮ್ಮಲ ಸುನೀಲ್ ಕುಮಾರ್, ಕೆ.ಎನ್. ರಮೇಶ್ , ಡಾ. ಕೆ.ವಿ. ರಾಜೇಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>