<p><strong>ಬೆಂಗಳೂರು</strong>: ‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯು ನಗರ ಆಡಳಿತಕ್ಕೆ ಮಾದರಿ ಆಗಿದೆ’ ಎಂದು ಶಿವಾಜಿ ನಗರ ಶಾಸಕ ರಿಜ್ವಾನ್ ಅರ್ಷದ್ ಹೇಳಿದರು. </p>.<p>ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರ (ಬಿಐಸಿ) ಮತ್ತು ಜನಾಗ್ರಹ ಶನಿವಾರ ಆಯೋಜಿಸಿದ್ದ ‘ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಜಿ) ಕಾಯ್ದೆ ಬೆಂಗಳೂರಿಗೆ ಫಲ ನೀಡಬಹುದೇ?’ ಎಂಬ ಸಂವಾದದಲ್ಲಿ ಅವರು ಮಾತನಾಡಿದರು. </p>.<p>‘ಬೆಂಗಳೂರು ನಗರದ ಅಭಿವೃದ್ಧಿಗೆ ಕೆಲಸ ಮಾಡುವ ನಿಗಮಗಳು, ವಿವಿಧ ಸರ್ಕಾರಿ ಒಡೆತನದ ಸಂಸ್ಥೆಗಳ ನಡುವೆ ವಿಕೇಂದ್ರಿಕರಣ, ಏಕೀಕರಣ ಮತ್ತು ಸಮನ್ವಯ ಸಾಧಿಸಲು ಜಿಬಿಜಿ ಕಾಯ್ದೆಯನ್ನು ಮಾಡಲಾಗಿದೆ. ಇದು ಬೆಂಗಳೂರಿನ ನಾಗರಿಕರ ಆಕಾಂಕ್ಷೆಗಳನ್ನು ಪೂರೈಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ’ ಎಂದು ಭರವಸೆ ವ್ಯಕ್ತಪಡಿಸಿದರು. </p>.<p>ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ‘ಜಿಬಿಜಿ ಮಸೂದೆಯು ಬೆಂಗಳೂರಿನ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಇದು ಕೆಲವರ ಕೈಯಲ್ಲಿ ಮಾತ್ರ ಅಧಿಕಾರವನ್ನು ಕೇಂದ್ರೀಕರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. </p>.<p>ಬ್ರ್ಯಾಂಡ್ ಬೆಂಗಳೂರು ಸಮಿತಿಯ ಸದಸ್ಯರಾದ ವಿ. ರವಿಚಂದರ್ ಮಾತನಾಡಿ, ‘ಜಿಬಿಜಿ ಕಾಯ್ದೆಯು ಭಾರತದಲ್ಲಿ ಮೆಗಾಸಿಟಿಗಳಿಗೆ ಒಂದು ದಿಟ್ಟ ಪ್ರಯೋಗವಾಗಿದೆ. ಈ ಕಾಯ್ದೆಯನ್ನು ಹೇಗೆ ಅನುಷ್ಠಾನ ಮಾಡಲಾಗುತ್ತದೆ ಹಾಗೂ ನಾಗರಿಕರು ಈ ಕಾನೂನಿನ ನಿಯಮವನ್ನು ಹೇಗೆ ಪಾಲಿಸುತ್ತಾರೆ ಎಂಬುದರ ಮೇಲೆ ಇದರ ಯಶಸ್ಸು ಅವಲಂಬಿತವಾಗಿದೆ’ ಎಂದರು. </p>.<p>ಜನಾಗ್ರಹದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಾಂತ್ ವಿಶ್ವನಾಥನ್ ಸಂವಾದವನ್ನು ನಿರ್ವಹಿಸಿದರು. ಜನಾಗ್ರಹ ಮತ್ತು ಜನ ಅರ್ಬನ್ ಸ್ಪೇಸ್ ಫೌಂಡೇಷನ್ನ ಪಾಲಿಸಿ ವಿಭಾಗದ ಸಹಾಯಕ ನಿರ್ದೇಶಕರಾದ ವಿ.ಆರ್. ವಚನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯು ನಗರ ಆಡಳಿತಕ್ಕೆ ಮಾದರಿ ಆಗಿದೆ’ ಎಂದು ಶಿವಾಜಿ ನಗರ ಶಾಸಕ ರಿಜ್ವಾನ್ ಅರ್ಷದ್ ಹೇಳಿದರು. </p>.<p>ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರ (ಬಿಐಸಿ) ಮತ್ತು ಜನಾಗ್ರಹ ಶನಿವಾರ ಆಯೋಜಿಸಿದ್ದ ‘ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಜಿ) ಕಾಯ್ದೆ ಬೆಂಗಳೂರಿಗೆ ಫಲ ನೀಡಬಹುದೇ?’ ಎಂಬ ಸಂವಾದದಲ್ಲಿ ಅವರು ಮಾತನಾಡಿದರು. </p>.<p>‘ಬೆಂಗಳೂರು ನಗರದ ಅಭಿವೃದ್ಧಿಗೆ ಕೆಲಸ ಮಾಡುವ ನಿಗಮಗಳು, ವಿವಿಧ ಸರ್ಕಾರಿ ಒಡೆತನದ ಸಂಸ್ಥೆಗಳ ನಡುವೆ ವಿಕೇಂದ್ರಿಕರಣ, ಏಕೀಕರಣ ಮತ್ತು ಸಮನ್ವಯ ಸಾಧಿಸಲು ಜಿಬಿಜಿ ಕಾಯ್ದೆಯನ್ನು ಮಾಡಲಾಗಿದೆ. ಇದು ಬೆಂಗಳೂರಿನ ನಾಗರಿಕರ ಆಕಾಂಕ್ಷೆಗಳನ್ನು ಪೂರೈಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ’ ಎಂದು ಭರವಸೆ ವ್ಯಕ್ತಪಡಿಸಿದರು. </p>.<p>ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ‘ಜಿಬಿಜಿ ಮಸೂದೆಯು ಬೆಂಗಳೂರಿನ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಇದು ಕೆಲವರ ಕೈಯಲ್ಲಿ ಮಾತ್ರ ಅಧಿಕಾರವನ್ನು ಕೇಂದ್ರೀಕರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. </p>.<p>ಬ್ರ್ಯಾಂಡ್ ಬೆಂಗಳೂರು ಸಮಿತಿಯ ಸದಸ್ಯರಾದ ವಿ. ರವಿಚಂದರ್ ಮಾತನಾಡಿ, ‘ಜಿಬಿಜಿ ಕಾಯ್ದೆಯು ಭಾರತದಲ್ಲಿ ಮೆಗಾಸಿಟಿಗಳಿಗೆ ಒಂದು ದಿಟ್ಟ ಪ್ರಯೋಗವಾಗಿದೆ. ಈ ಕಾಯ್ದೆಯನ್ನು ಹೇಗೆ ಅನುಷ್ಠಾನ ಮಾಡಲಾಗುತ್ತದೆ ಹಾಗೂ ನಾಗರಿಕರು ಈ ಕಾನೂನಿನ ನಿಯಮವನ್ನು ಹೇಗೆ ಪಾಲಿಸುತ್ತಾರೆ ಎಂಬುದರ ಮೇಲೆ ಇದರ ಯಶಸ್ಸು ಅವಲಂಬಿತವಾಗಿದೆ’ ಎಂದರು. </p>.<p>ಜನಾಗ್ರಹದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಾಂತ್ ವಿಶ್ವನಾಥನ್ ಸಂವಾದವನ್ನು ನಿರ್ವಹಿಸಿದರು. ಜನಾಗ್ರಹ ಮತ್ತು ಜನ ಅರ್ಬನ್ ಸ್ಪೇಸ್ ಫೌಂಡೇಷನ್ನ ಪಾಲಿಸಿ ವಿಭಾಗದ ಸಹಾಯಕ ನಿರ್ದೇಶಕರಾದ ವಿ.ಆರ್. ವಚನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>