<p><strong>ಬೆಂಗಳೂರು</strong>: ಗೀತಂ ಡೀಮ್ಡ್ ಟುಬಿ ವಿಶ್ವವಿದ್ಯಾಲಯವು ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಸಮಾನತೆ, ಸಬಲೀಕರಣ, ಅಭಿವೃದ್ದಿಗಾಗಿ ವಿಜ್ಞಾನ ಯೋಜನೆಯಡಿ(ಸೀಡ್) ಜೇನುಕುರುಬ ಸಮುದಾಯವರಿಗೆ ಜೇನು ಪೆಟ್ಟಿಗೆ, ಉಪಕರಣಗಳನ್ನು ವಿತರಣೆ ಮಾಡಿದೆ.</p>.<p>ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯಲ್ಲಿ ನಡೆದ ಸಮಾರಂಭದಲ್ಲಿ ಆಧುನಿಕ ಜೇನು ಸಾಕಾಣಿಕೆ ತರಬೇತಿ ಹಾಗೂ ತಂತ್ರಜ್ಞಾನದ ನೆರವು ಪಡೆದ ಫಲಾನುಭವಿಗಳಿಗೆ 500 ಪೆಟ್ಟಿಗೆ, ಉಪಕರಣಗಳನ್ನು ನೀಡಲಾಯಿತು.</p>.<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜೇನು ಕೃಷಿ ತಜ್ಞ ಕೆ.ಟಿ.ವಿಜಯಕುಮಾರ್ ಹಾಗೂ ಅವರ ತಂಡದವರು ಜೇನು ಗೂಡು ನಿರ್ವಹಣೆ, ರೋಗ ನಿಯಂತ್ರಣ, ಜೇನು ಸಂಸ್ಕರಣೆ ಹಾಗೂ ಮಾರುಕಟ್ಟೆ ತಂತ್ರಗಳ ಕುರಿತು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು.</p>.<p>ಇದೇ ವೇಳೆ ಜೇನು ಉತ್ಪನ್ನಗಳ ಮೌಲ್ಯವರ್ಧನೆಗೆ ಅಗತ್ಯ ಸೌಲಭ್ಯಗಳೊಂದಿಗೆ ಎರಡು ಜೇನು ಸಂಸ್ಕರಣಾ ಕೇಂದ್ರಗಳನ್ನು ಸ್ಥಾಪಿಸಲಾಯಿತು.</p>.<p>ಗೀತಂ ವಿ.ವಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಐ.ಜೀನಾ ಜಾಕೋಬ್, ಸಹ ಸಂಶೋಧಕರಾದ ಕೆ.ಗೀತಾ, ಟಿ.ಪ್ರಸನ್ನ ವೆಂಕಟೇಶನ್, ಎ.ವಿಶ್ವಭಾರತಿ, ಸುಜಿತ್ ಬಸಕ್, ಡಿ.ನಿರ್ಮಲಾದೇವಿ, ಯೋಜನೆ ಮಾರ್ಗದರ್ಶಕರಾದ ಗೀತಂ ನಿರ್ದೇಶಕ ವಂಶೀಧರ್ ಯಂಡಪಲ್ಲಿ, ಸಂಶೋಧನಾ ಸಮಿತಿ ಅಧ್ಯಕ್ಷ ಕೆ.ಜಿ. ಮೋಹನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗೀತಂ ಡೀಮ್ಡ್ ಟುಬಿ ವಿಶ್ವವಿದ್ಯಾಲಯವು ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಸಮಾನತೆ, ಸಬಲೀಕರಣ, ಅಭಿವೃದ್ದಿಗಾಗಿ ವಿಜ್ಞಾನ ಯೋಜನೆಯಡಿ(ಸೀಡ್) ಜೇನುಕುರುಬ ಸಮುದಾಯವರಿಗೆ ಜೇನು ಪೆಟ್ಟಿಗೆ, ಉಪಕರಣಗಳನ್ನು ವಿತರಣೆ ಮಾಡಿದೆ.</p>.<p>ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯಲ್ಲಿ ನಡೆದ ಸಮಾರಂಭದಲ್ಲಿ ಆಧುನಿಕ ಜೇನು ಸಾಕಾಣಿಕೆ ತರಬೇತಿ ಹಾಗೂ ತಂತ್ರಜ್ಞಾನದ ನೆರವು ಪಡೆದ ಫಲಾನುಭವಿಗಳಿಗೆ 500 ಪೆಟ್ಟಿಗೆ, ಉಪಕರಣಗಳನ್ನು ನೀಡಲಾಯಿತು.</p>.<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜೇನು ಕೃಷಿ ತಜ್ಞ ಕೆ.ಟಿ.ವಿಜಯಕುಮಾರ್ ಹಾಗೂ ಅವರ ತಂಡದವರು ಜೇನು ಗೂಡು ನಿರ್ವಹಣೆ, ರೋಗ ನಿಯಂತ್ರಣ, ಜೇನು ಸಂಸ್ಕರಣೆ ಹಾಗೂ ಮಾರುಕಟ್ಟೆ ತಂತ್ರಗಳ ಕುರಿತು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು.</p>.<p>ಇದೇ ವೇಳೆ ಜೇನು ಉತ್ಪನ್ನಗಳ ಮೌಲ್ಯವರ್ಧನೆಗೆ ಅಗತ್ಯ ಸೌಲಭ್ಯಗಳೊಂದಿಗೆ ಎರಡು ಜೇನು ಸಂಸ್ಕರಣಾ ಕೇಂದ್ರಗಳನ್ನು ಸ್ಥಾಪಿಸಲಾಯಿತು.</p>.<p>ಗೀತಂ ವಿ.ವಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಐ.ಜೀನಾ ಜಾಕೋಬ್, ಸಹ ಸಂಶೋಧಕರಾದ ಕೆ.ಗೀತಾ, ಟಿ.ಪ್ರಸನ್ನ ವೆಂಕಟೇಶನ್, ಎ.ವಿಶ್ವಭಾರತಿ, ಸುಜಿತ್ ಬಸಕ್, ಡಿ.ನಿರ್ಮಲಾದೇವಿ, ಯೋಜನೆ ಮಾರ್ಗದರ್ಶಕರಾದ ಗೀತಂ ನಿರ್ದೇಶಕ ವಂಶೀಧರ್ ಯಂಡಪಲ್ಲಿ, ಸಂಶೋಧನಾ ಸಮಿತಿ ಅಧ್ಯಕ್ಷ ಕೆ.ಜಿ. ಮೋಹನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>