ಎತ್ತಿನಹೊಳೆ ಯೋಜನೆಯ ಕಾಮಗಾರಿಯಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರು, ಎರಡು ವರ್ಷಗಳ ಹಿಂದೆ ಚನ್ನಹಳ್ಳಿ ಗ್ರಾಮದಲ್ಲಿ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿ ವಾಸವಾಗಿದ್ದರು. ಕಲ್ಲು ಸ್ಫೋಟಿಸಲು ಬಳಸುತ್ತಿದ್ದ ಜಿಲೆಟಿನ್ ಕಡ್ಡಿಗಳನ್ನು ಅವರು ಸ್ಥಳಾಂತರಗೊಳ್ಳುವ ಸಂದರ್ಭ
ದಲ್ಲಿ ಬಿಟ್ಟು ಹೋಗಿರುವ ಸಾಧ್ಯತೆ ಇದೆ. ಮಕ್ಕಳು ಆಟ ಆಡುವಾಗ ಅವು ಸಿಕ್ಕಿದ್ದು, ಈ ಅವಘಡ ಸಂಭವಿಸಿದೆ ಎಂದು ಆಲೂರು ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ.ಕುಮಾರ್ ತಿಳಿಸಿದ್ದಾರೆ.