<p><strong>ಬೆಂಗಳೂರು:</strong> ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಷಯನಗರದಲ್ಲಿ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್ಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.</p>.<p>ಚಂದ್ರು ಅವರಿಗೆ ಸೇರಿದ ನಿವೇಶನದಲ್ಲಿ 15 ಜಿಲೆಟಿನ್ ಕಡ್ಡಿಗಳು ಹಾಗೂ 30 ಡಿಟೊನೇಟರ್ಗಳು, ಒಂದು ಟ್ರ್ಯಾಕ್ಟರ್ ಹಾಗೂ ಜೆಸಿಬಿ ಯಂತ್ರ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಸ್ಥಳಕ್ಕೆ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ನಿವೇಶನದ ಮಾಲೀಕ ಚಂದ್ರು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಮೂಲಗಳು ಹೇಳಿವೆ.</p>.<p>‘ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹ ಮಾಡಿಕೊಂಡಿರುವುದು ಪತ್ತೆಯಾಗಿದೆ. ಪ್ರತಿನಿತ್ಯ ಮಧ್ಯಾಹ್ನ 10.30ರಿಂದ 2ರ ಒಳಗೆ ಕಲ್ಲುಬಂಡೆ ಒಡೆಯಲು ಈ ಸ್ಪೋಟಕಗಳನ್ನು ಬಳಕೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ, ದಾಳಿ ನಡೆಸಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಪೊಲೀಸರು ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆಯೇ ಕಾರ್ಮಿಕರು ಪರಾರಿ ಆಗಿದ್ದಾರೆ ಎಂದು ಮೂಲಗಳು ಹೇಳಿವೆ.ಸ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಷಯನಗರದಲ್ಲಿ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್ಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.</p>.<p>ಚಂದ್ರು ಅವರಿಗೆ ಸೇರಿದ ನಿವೇಶನದಲ್ಲಿ 15 ಜಿಲೆಟಿನ್ ಕಡ್ಡಿಗಳು ಹಾಗೂ 30 ಡಿಟೊನೇಟರ್ಗಳು, ಒಂದು ಟ್ರ್ಯಾಕ್ಟರ್ ಹಾಗೂ ಜೆಸಿಬಿ ಯಂತ್ರ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಸ್ಥಳಕ್ಕೆ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ನಿವೇಶನದ ಮಾಲೀಕ ಚಂದ್ರು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಮೂಲಗಳು ಹೇಳಿವೆ.</p>.<p>‘ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹ ಮಾಡಿಕೊಂಡಿರುವುದು ಪತ್ತೆಯಾಗಿದೆ. ಪ್ರತಿನಿತ್ಯ ಮಧ್ಯಾಹ್ನ 10.30ರಿಂದ 2ರ ಒಳಗೆ ಕಲ್ಲುಬಂಡೆ ಒಡೆಯಲು ಈ ಸ್ಪೋಟಕಗಳನ್ನು ಬಳಕೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ, ದಾಳಿ ನಡೆಸಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಪೊಲೀಸರು ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆಯೇ ಕಾರ್ಮಿಕರು ಪರಾರಿ ಆಗಿದ್ದಾರೆ ಎಂದು ಮೂಲಗಳು ಹೇಳಿವೆ.ಸ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>