<p><strong>ಬೆಂಗಳೂರು</strong>: ಬಯೋಕಾನ್ ಸಮೂಹದ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಭಾರತದಲ್ಲಿ ಜೈವಿಕ ವಿಜ್ಞಾನದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಇಂಡಿಯನ್ ಸೊಸೈಟಿ ಫಾರ್ ಕ್ವಾಲಿಟಿ (ಐಎಸ್ಕ್ಯು) ‘ಜೆಮ್ಷೆಡ್ ಜಿ ಟಾಟಾ ಪ್ರಶಸ್ತಿ’ ನೀಡಿ ಗೌರವಿಸಿದೆ.</p>.<p>ಬೆಂಗಳೂರಿನಲ್ಲಿ ನಡೆದ ಐಎಸ್ಕ್ಯು ವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>‘ಆಧುನಿಕ ಭಾರತೀಯ ಕೈಗಾರಿಕಾ ಪಿತಾಮಹ ಎಂದು ಹೆಸರಾಗಿರುವ ಜೆಮ್ಷೆಡ್ ನುಝರ್ ವಾನ್ ಜಿ ಟಾಟಾ ಅವರ ಹೆಸರಿನಲ್ಲಿರುವ ಈ ಪ್ರಶಸ್ತಿಯನ್ನು ಭಾರತೀಯ ಸಮಾಜಕ್ಕೆ ಗುಣಮಟ್ಟ, ಬದ್ಧತೆ ಮತ್ತು ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಉದ್ಯಮಿಗಳಿಗೆ ನೀಡಿ ಗೌರವಿಸಲಾಗುತ್ತದೆ.</p>.<p>ಐಎಸ್ಕ್ಯು ಅಧ್ಯಕ್ಷ ಜನಕ್ ಕುಮಾರ್ ಮೆಹ್ತಾ ಮಾತನಾಡಿ, ‘1978 ರಿಂದ ಭಾರತದಲ್ಲಿ ಜೀವವಿಜ್ಞಾನ ಆಂದೋಲನದಲ್ಲಿ ಮುಂಚೂಣಿಯಲ್ಲಿರುವ ಕಿರಣ್ ಮಜುಂದಾರ್ ಶಾ ಅವರಿಗೆ ಈ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ ಗ್ರಾಹಕರಿಗೆ ಸೇವೆ ಸಲ್ಲಿಸಲು ಬಯೋಕಾನ್ ಲಿಮಿಟೆಡ್ ಮತ್ತು ಸಂಬಂಧಿತ ಕಂಪನಿಗಳನ್ನು ಸ್ಥಾಪಿಸುವ ಮೂಲಕ ಸಮಾಜಕ್ಕೆ ಒಳಿತು ಮಾಡಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಯೋಕಾನ್ ಸಮೂಹದ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಭಾರತದಲ್ಲಿ ಜೈವಿಕ ವಿಜ್ಞಾನದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಇಂಡಿಯನ್ ಸೊಸೈಟಿ ಫಾರ್ ಕ್ವಾಲಿಟಿ (ಐಎಸ್ಕ್ಯು) ‘ಜೆಮ್ಷೆಡ್ ಜಿ ಟಾಟಾ ಪ್ರಶಸ್ತಿ’ ನೀಡಿ ಗೌರವಿಸಿದೆ.</p>.<p>ಬೆಂಗಳೂರಿನಲ್ಲಿ ನಡೆದ ಐಎಸ್ಕ್ಯು ವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>‘ಆಧುನಿಕ ಭಾರತೀಯ ಕೈಗಾರಿಕಾ ಪಿತಾಮಹ ಎಂದು ಹೆಸರಾಗಿರುವ ಜೆಮ್ಷೆಡ್ ನುಝರ್ ವಾನ್ ಜಿ ಟಾಟಾ ಅವರ ಹೆಸರಿನಲ್ಲಿರುವ ಈ ಪ್ರಶಸ್ತಿಯನ್ನು ಭಾರತೀಯ ಸಮಾಜಕ್ಕೆ ಗುಣಮಟ್ಟ, ಬದ್ಧತೆ ಮತ್ತು ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಉದ್ಯಮಿಗಳಿಗೆ ನೀಡಿ ಗೌರವಿಸಲಾಗುತ್ತದೆ.</p>.<p>ಐಎಸ್ಕ್ಯು ಅಧ್ಯಕ್ಷ ಜನಕ್ ಕುಮಾರ್ ಮೆಹ್ತಾ ಮಾತನಾಡಿ, ‘1978 ರಿಂದ ಭಾರತದಲ್ಲಿ ಜೀವವಿಜ್ಞಾನ ಆಂದೋಲನದಲ್ಲಿ ಮುಂಚೂಣಿಯಲ್ಲಿರುವ ಕಿರಣ್ ಮಜುಂದಾರ್ ಶಾ ಅವರಿಗೆ ಈ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ ಗ್ರಾಹಕರಿಗೆ ಸೇವೆ ಸಲ್ಲಿಸಲು ಬಯೋಕಾನ್ ಲಿಮಿಟೆಡ್ ಮತ್ತು ಸಂಬಂಧಿತ ಕಂಪನಿಗಳನ್ನು ಸ್ಥಾಪಿಸುವ ಮೂಲಕ ಸಮಾಜಕ್ಕೆ ಒಳಿತು ಮಾಡಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>