<p><strong>ಬೆಂಗಳೂರು:</strong> ನಗರದ ಹೊಸಕೆರೆಹಳ್ಳಿಯ ನಿವಾಸಿ, ಭೂವಿಜ್ಞಾನ ವಿಷಯದ ನಿವೃತ್ತ ಪ್ರಾಧ್ಯಾಪಕ ಬಿ.ಮಹಾಬಲೇಶ್ವರ್ (83) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ನಿಧನರಾದರು.</p><p>ಮೃತರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.</p><p>1942ರ ಜನವರಿ 25ರಂದು ಮಂಗಳೂರಿನಲ್ಲಿ ಜನಿಸಿದ ಮಹಾಬಲೇಶ್ವರ್ ಅವರು, ಮದ್ರಾಸ್ನ ರಾಮಕೃಷ್ಣ ಮಿಷನ್ ಶಾಲೆಯಲ್ಲಿ ಪ್ರೌಢಶಿಕ್ಷಣ, ಆಂಧ್ರದ ಅನಂತಪುರದಲ್ಲಿ ಕಾಲೇಜು ಶಿಕ್ಷಣ ಮತ್ತು ತಿರುಪತಿ ಶ್ರೀವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದರು. 1970ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದರು.</p><p>1962ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೂವಿಜ್ಞಾನ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿದ ಮಹಾಬಲೇಶ್ವರ್ ಅವರು 35 ವರ್ಷಕ್ಕೂ ಹೆಚ್ಚು ಕಾಲ<br>ಪ್ರಾಧ್ಯಾಪಕರಾಗಿ, ಸಂಶೋಧಕರಾಗಿ, ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಸಿಂಡಿಕೇಟ್ ಸದಸ್ಯರಾಗಿಯೂ ಕೆಲಸ ಮಾಡಿದ್ದರು.</p><p>ಸುಮಾರು 20ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು. ಬ್ರಿಟನ್, ಫ್ರಾನ್ಸ್, ಜರ್ಮನಿ, ಜಪಾನ್, ಅಮೆರಿಕ ಸೇರಿದಂತೆ ಅನೇಕ ದೇಶಗಳ ಭೂವಿಜ್ಞಾನಿಗಳೊಂದಿಗೆ ಕೆಲಸ ಮಾಡಿ ವಿಶ್ವಮಟ್ಟದಲ್ಲೂ ಖ್ಯಾತಿ ಪಡೆದಿದ್ದರು.</p><p>2002ರಲ್ಲಿ ನಿವೃತ್ತಿಯಾದ ನಂತರವೂ ತಮ್ಮ ಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿದ್ದರು. ಜೊತೆಗೆ, ಜಿಯಾಲಜಿಕಲ್ ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ, ಸಂಸ್ಥೆ ಪ್ರಕಟಿಸುವ ನಿಯತಕಾಲಿಕಕ್ಕೆ ಸಂಪಾದಕರಾಗಿ ಕೆಲಸ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಹೊಸಕೆರೆಹಳ್ಳಿಯ ನಿವಾಸಿ, ಭೂವಿಜ್ಞಾನ ವಿಷಯದ ನಿವೃತ್ತ ಪ್ರಾಧ್ಯಾಪಕ ಬಿ.ಮಹಾಬಲೇಶ್ವರ್ (83) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ನಿಧನರಾದರು.</p><p>ಮೃತರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.</p><p>1942ರ ಜನವರಿ 25ರಂದು ಮಂಗಳೂರಿನಲ್ಲಿ ಜನಿಸಿದ ಮಹಾಬಲೇಶ್ವರ್ ಅವರು, ಮದ್ರಾಸ್ನ ರಾಮಕೃಷ್ಣ ಮಿಷನ್ ಶಾಲೆಯಲ್ಲಿ ಪ್ರೌಢಶಿಕ್ಷಣ, ಆಂಧ್ರದ ಅನಂತಪುರದಲ್ಲಿ ಕಾಲೇಜು ಶಿಕ್ಷಣ ಮತ್ತು ತಿರುಪತಿ ಶ್ರೀವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದರು. 1970ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದರು.</p><p>1962ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೂವಿಜ್ಞಾನ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿದ ಮಹಾಬಲೇಶ್ವರ್ ಅವರು 35 ವರ್ಷಕ್ಕೂ ಹೆಚ್ಚು ಕಾಲ<br>ಪ್ರಾಧ್ಯಾಪಕರಾಗಿ, ಸಂಶೋಧಕರಾಗಿ, ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಸಿಂಡಿಕೇಟ್ ಸದಸ್ಯರಾಗಿಯೂ ಕೆಲಸ ಮಾಡಿದ್ದರು.</p><p>ಸುಮಾರು 20ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು. ಬ್ರಿಟನ್, ಫ್ರಾನ್ಸ್, ಜರ್ಮನಿ, ಜಪಾನ್, ಅಮೆರಿಕ ಸೇರಿದಂತೆ ಅನೇಕ ದೇಶಗಳ ಭೂವಿಜ್ಞಾನಿಗಳೊಂದಿಗೆ ಕೆಲಸ ಮಾಡಿ ವಿಶ್ವಮಟ್ಟದಲ್ಲೂ ಖ್ಯಾತಿ ಪಡೆದಿದ್ದರು.</p><p>2002ರಲ್ಲಿ ನಿವೃತ್ತಿಯಾದ ನಂತರವೂ ತಮ್ಮ ಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿದ್ದರು. ಜೊತೆಗೆ, ಜಿಯಾಲಜಿಕಲ್ ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ, ಸಂಸ್ಥೆ ಪ್ರಕಟಿಸುವ ನಿಯತಕಾಲಿಕಕ್ಕೆ ಸಂಪಾದಕರಾಗಿ ಕೆಲಸ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>