‘ನ.4ರಂದು ರಾತ್ರಿ 8.30ರ ಸುಮಾರಿಗೆ ಪ್ರತಿಮಾ ಮನೆಗೆ ತೆರಳಿದ್ದ ಆರೋಪಿ ಮಹಡಿಯಲ್ಲಿ ಅವಿತು ಕುಳಿತಿದ್ದ. ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಪ್ರತಿಮಾ ಅವರನ್ನು ಹಿಂಬಾಲಿಸಿದ್ದ ಆರೋಪಿ, ಅವರ ಬಾಯಿ ಮುಚ್ಚಿ ವೇಲ್ನಿಂದ ಕುತ್ತಿಗೆಯನ್ನು ಬಿಗಿದಿದ್ದ. ನಂತರ ಕತ್ತು ಕೊಯ್ದು ಕೊಲೆ ಮಾಡಿದ್ದ. ಕೈಗಳಲ್ಲಿದ್ದ ಚಿನ್ನದ ಬಳೆ, ಚಿನ್ನದ ಸರ, ಕಬೋರ್ಡ್ನಲ್ಲಿದ್ದ ₹5 ಲಕ್ಷ ನಗದು ದೋಚಿ ಪರಾರಿಯಾಗಿದ್ದ. ಆರೋಪಿ ಕೃತ್ಯ ನಡೆಸಲು ಎಂಟು ನಿಮಿಷ ತೆಗೆದುಕೊಂಡಿದ್ದ. ಅದಾದ ಮೇಲೆ ಇಬ್ಬರು ಸ್ನೇಹಿತರ ಜೊತೆಗೆ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ. ಅಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು’ ಎಂದು ಉಲ್ಲೇಖಿಸಲಾಗಿದೆ.
***