ಈ ಸಂಬಂಧ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ‘ಕನ್ನಡ ಶಿಕ್ಷಣ ಮಾಧ್ಯಮಕ್ಕೆ ಇರುವ ಅಡಚಣೆಯ ನಿವಾರಣೆಗಾಗಿ ಈ ಪತ್ರ ಬರೆಯುತ್ತಿದ್ದೇನೆ. ಒಂದರಿಂದ ಐದನೆ ತರಗತಿವರೆಗೆ ಮಾತೃಭಾಷೆ ಶಿಕ್ಷಣ ನೀಡಲು ಮಸೂದೆ ರಚಿಸಿ, ರಾಷ್ಟ್ರಪತಿ ಅಂಗೀಕಾರಕ್ಕೆ ಕಳುಹಿಸಲಾಗಿತ್ತು. ಆ ಮಸೂದೆಯನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ರಾಜ್ಯ ಸರ್ಕಾರವು ಈ ಮಸೂದೆಯ ಮಹತ್ವವನ್ನು ಕೇಂದ್ರಕ್ಕೆ ಮನವರಿಕೆ ಮಾಡಿಸಿ, ರಾಷ್ಟ್ರಪತಿಯ ಅಂಗೀಕಾರ ಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.