<p><strong>ಬೆಂಗಳೂರು:</strong> ‘ಸಮಾಜವಾದದ ಬಗ್ಗೆ ಸಂಪೂರ್ಣ ಅಪನಂಬಿಕೆಯನ್ನು ಹೊಂದಿರುವ ಯುವಜನತೆಗೆ ಈ ಕುರಿತು ಅರಿವು ಮೂಡಿಸಿ, ಕರೆತಂದಲ್ಲಿ ದೇಶವನ್ನು ಕಾಡುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು’ ಎಂದುರೈತ ನಾಯಕ ಕೆ.ಟಿ.ಗಂಗಾಧರ್ ಅಭಿಮತ ವ್ಯಕ್ತಪಡಿಸಿದರು.</p>.<p>ಮಹಾತ್ಮ ಗಾಂಧಿ–ಕಸ್ತೂರಬಾ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಪರ್ಯಾಯ ವ್ಯವಸ್ಥೆಗಾಗಿ ರಾಷ್ಟ್ರಮಟ್ಟದ ಸಮಾಜವಾದಿ ಸಮಾಗಮ’ ಕಾರ್ಯಕ್ರಮದಲ್ಲಿ ಸಮಾಜವಾದಿ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರ ಸಮಸಮಾಜ ನಿರ್ಮಿಸುವಲ್ಲಿ ಸಮಾಜವಾದಿಗಳ ಪಾತ್ರ ಮಹತ್ವದ್ದು. ಶೋಷಿತ ವರ್ಗಗಳು ಹಾಗೂ ದುಡಿಯುವವರ ಧ್ವನಿಯಾಗಿ ನಿಂತಿದ್ದ ಸಮಾಜವಾದ ಆಕರ್ಷಣೆಯನ್ನು ಕಳೆದುಕೊಳ್ಳುತ್ತಿದೆ. ಸಮಾಜವಾದದ ಬಗ್ಗೆ ನಂಬಿಕೆಯನ್ನು ಮರು ಸೃಷ್ಟಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ’ ಎಂದರು.</p>.<p>‘ಜನರನ್ನು ಕಾಡುತ್ತಿರುವ ಅನೇಕ ಸಮಸ್ಯೆಗಳ ವಿರುದ್ಧ ಹೋರಾಟ ರೂಪಿಸುವ ಕುರಿತು ಸಮಾಜವಾದಿಗಳು ಚಿಂತನೆ ಮಾಡಬೇಕು. ಈ ಬಗ್ಗೆ ವಿದ್ಯಾರ್ಥಿಗಳು, ಯುವಜನರು, ಕೃಷಿ ಕೂಲಿ ಕಾರ್ಮಿಕರು, ರೈತರು ಸೇರಿದಂತೆ ಎಲ್ಲರನ್ನೂ ಸೆಳೆಯಬೇಕು. ವಿದ್ಯಾವಂತರು, ಉದ್ಯೋಗಸ್ಥ ಯುವಜನರು, ಚಳವಳಿಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p><strong>ಸಂವಿಧಾನ ವಿರೋಧಿ ಕಾಯ್ದೆ:</strong>ಲೇಖಕಿ ಬಿ.ಟಿ.ಲಲಿತಾ ನಾಯಕ್, ‘ಸಮಾಜವಾದಿ ಚಿಂತನೆಗಳು ಕಮ್ಯುನಿಸ್ಟ್ ಚಿಂತನೆಗಳ ಮತ್ತೊಂದು ಸ್ವರೂಪ. ಪಂಚಾಯಿತಿ ಮಟ್ಟದಿಂದ ಹಿಡಿದು ರಾಜ್ಯ, ದೇಶದಲ್ಲಿ ಎಲ್ಲರಿಗೂ ಅಧಿಕಾರ ಹಂಚಿಕೆಯಾಗಬೇಕು ಎಂಬುದೇ ಸಮಾಜವಾದದ ಮೂಲ ಆಶಯ. ಆದರೆ, ಇದು ಎಲ್ಲಿಯೂ ಚಾಲನೆಗೆ ಬಂದಿಲ್ಲ’ ಎಂದರು.</p>.<p>ಸಮಾಜವಾದಿ ಅಧ್ಯಯನ ಕೇಂದ್ರ, ರಾಷ್ಟ್ರ ಸೇವಾ ದಳ, ಹಿಂದ್ ಮಜ್ದೂರ್ ಸಭಾ, ಕರ್ನಾಟಕ ರಾಜ್ಯ ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಸೇರಿ ಈ ಕಾರ್ಯಕ್ರಮ ಆಯೋಜಿಸಿದ್ದವು.</p>.<p><strong>‘ಕಾಯ್ದೆ ವಿರುದ್ಧ ಧ್ವನಿ ಎತ್ತಿ’</strong><br />‘ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿಯಾಗಿದೆ. ಅಪಾಯಕಾರಿ ಕಾಯ್ದೆಯ ವಿರುದ್ಧ ಎಲ್ಲರೂ ಧ್ವನಿ ಎತ್ತಬೇಕು. ಅಲ್ಲದೆ, ಮಹಿಳೆಯರ ಮೇಲಿನ ಅನ್ಯಾಯ, ದೌರ್ಜನ್ಯ, ದಬ್ಬಾಳಿಕೆಗಳು ಹೆಚ್ಚಲು ಸರ್ಕಾರದ ಜನವಿರೋಧಿ ನೀತಿಗಳು ಕಾರಣವಾಗುತ್ತಿದ್ದು, ಈ ಬಗ್ಗೆ ಹೋರಾಟ ನಡೆಸಬೇಕು’ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟರು.</p>.<p><strong>70 ವರ್ಷಗಳಾದರೂ ಪರಿಹಾರ ಸಿಕ್ಕಿಲ್ಲ</strong><br />ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದರೂ ಯಾವುದೇ ಮೂಲಭೂತ ಸಮಸ್ಯೆಗಳಿಗೂ ಪರಿಹಾರ ಸಿಕ್ಕಿಲ್ಲ. ಈ ಅವಧಿಯಲ್ಲಿ ಅಧಿಕಾರ ನಡೆಸಿದ ಎಲ್ಲ ರಾಜಕೀಯ ಪಕ್ಷಗಳೂ ಇದಕ್ಕೆ ಹೊಣೆಗಾರರು ಎಂದು ರೈತ ನಾಯಕ ಕೆ.ಟಿ.ಗಂಗಾಧರ್ ಅಭಿಪ್ರಾಯಪಟ್ಟರು</p>.<p>*<br />ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದರೂ ಯಾವುದೇ ಮೂಲಭೂತ ಸಮಸ್ಯೆಗಳಿಗೂ ಪರಿಹಾರ ಸಿಕ್ಕಿಲ್ಲ. ಈ ಅವಧಿಯಲ್ಲಿ ಅಧಿಕಾರ ನಡೆಸಿದ ಎಲ್ಲ ರಾಜಕೀಯ ಪಕ್ಷಗಳೂ ಇದಕ್ಕೆ ಹೊಣೆಗಾರರು<br /><em><strong>–ಕೆ.ಟಿ.ಗಂಗಾಧರ್, ರೈತ ನಾಯಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಮಾಜವಾದದ ಬಗ್ಗೆ ಸಂಪೂರ್ಣ ಅಪನಂಬಿಕೆಯನ್ನು ಹೊಂದಿರುವ ಯುವಜನತೆಗೆ ಈ ಕುರಿತು ಅರಿವು ಮೂಡಿಸಿ, ಕರೆತಂದಲ್ಲಿ ದೇಶವನ್ನು ಕಾಡುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು’ ಎಂದುರೈತ ನಾಯಕ ಕೆ.ಟಿ.ಗಂಗಾಧರ್ ಅಭಿಮತ ವ್ಯಕ್ತಪಡಿಸಿದರು.</p>.<p>ಮಹಾತ್ಮ ಗಾಂಧಿ–ಕಸ್ತೂರಬಾ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಪರ್ಯಾಯ ವ್ಯವಸ್ಥೆಗಾಗಿ ರಾಷ್ಟ್ರಮಟ್ಟದ ಸಮಾಜವಾದಿ ಸಮಾಗಮ’ ಕಾರ್ಯಕ್ರಮದಲ್ಲಿ ಸಮಾಜವಾದಿ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರ ಸಮಸಮಾಜ ನಿರ್ಮಿಸುವಲ್ಲಿ ಸಮಾಜವಾದಿಗಳ ಪಾತ್ರ ಮಹತ್ವದ್ದು. ಶೋಷಿತ ವರ್ಗಗಳು ಹಾಗೂ ದುಡಿಯುವವರ ಧ್ವನಿಯಾಗಿ ನಿಂತಿದ್ದ ಸಮಾಜವಾದ ಆಕರ್ಷಣೆಯನ್ನು ಕಳೆದುಕೊಳ್ಳುತ್ತಿದೆ. ಸಮಾಜವಾದದ ಬಗ್ಗೆ ನಂಬಿಕೆಯನ್ನು ಮರು ಸೃಷ್ಟಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ’ ಎಂದರು.</p>.<p>‘ಜನರನ್ನು ಕಾಡುತ್ತಿರುವ ಅನೇಕ ಸಮಸ್ಯೆಗಳ ವಿರುದ್ಧ ಹೋರಾಟ ರೂಪಿಸುವ ಕುರಿತು ಸಮಾಜವಾದಿಗಳು ಚಿಂತನೆ ಮಾಡಬೇಕು. ಈ ಬಗ್ಗೆ ವಿದ್ಯಾರ್ಥಿಗಳು, ಯುವಜನರು, ಕೃಷಿ ಕೂಲಿ ಕಾರ್ಮಿಕರು, ರೈತರು ಸೇರಿದಂತೆ ಎಲ್ಲರನ್ನೂ ಸೆಳೆಯಬೇಕು. ವಿದ್ಯಾವಂತರು, ಉದ್ಯೋಗಸ್ಥ ಯುವಜನರು, ಚಳವಳಿಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p><strong>ಸಂವಿಧಾನ ವಿರೋಧಿ ಕಾಯ್ದೆ:</strong>ಲೇಖಕಿ ಬಿ.ಟಿ.ಲಲಿತಾ ನಾಯಕ್, ‘ಸಮಾಜವಾದಿ ಚಿಂತನೆಗಳು ಕಮ್ಯುನಿಸ್ಟ್ ಚಿಂತನೆಗಳ ಮತ್ತೊಂದು ಸ್ವರೂಪ. ಪಂಚಾಯಿತಿ ಮಟ್ಟದಿಂದ ಹಿಡಿದು ರಾಜ್ಯ, ದೇಶದಲ್ಲಿ ಎಲ್ಲರಿಗೂ ಅಧಿಕಾರ ಹಂಚಿಕೆಯಾಗಬೇಕು ಎಂಬುದೇ ಸಮಾಜವಾದದ ಮೂಲ ಆಶಯ. ಆದರೆ, ಇದು ಎಲ್ಲಿಯೂ ಚಾಲನೆಗೆ ಬಂದಿಲ್ಲ’ ಎಂದರು.</p>.<p>ಸಮಾಜವಾದಿ ಅಧ್ಯಯನ ಕೇಂದ್ರ, ರಾಷ್ಟ್ರ ಸೇವಾ ದಳ, ಹಿಂದ್ ಮಜ್ದೂರ್ ಸಭಾ, ಕರ್ನಾಟಕ ರಾಜ್ಯ ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಸೇರಿ ಈ ಕಾರ್ಯಕ್ರಮ ಆಯೋಜಿಸಿದ್ದವು.</p>.<p><strong>‘ಕಾಯ್ದೆ ವಿರುದ್ಧ ಧ್ವನಿ ಎತ್ತಿ’</strong><br />‘ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿಯಾಗಿದೆ. ಅಪಾಯಕಾರಿ ಕಾಯ್ದೆಯ ವಿರುದ್ಧ ಎಲ್ಲರೂ ಧ್ವನಿ ಎತ್ತಬೇಕು. ಅಲ್ಲದೆ, ಮಹಿಳೆಯರ ಮೇಲಿನ ಅನ್ಯಾಯ, ದೌರ್ಜನ್ಯ, ದಬ್ಬಾಳಿಕೆಗಳು ಹೆಚ್ಚಲು ಸರ್ಕಾರದ ಜನವಿರೋಧಿ ನೀತಿಗಳು ಕಾರಣವಾಗುತ್ತಿದ್ದು, ಈ ಬಗ್ಗೆ ಹೋರಾಟ ನಡೆಸಬೇಕು’ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟರು.</p>.<p><strong>70 ವರ್ಷಗಳಾದರೂ ಪರಿಹಾರ ಸಿಕ್ಕಿಲ್ಲ</strong><br />ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದರೂ ಯಾವುದೇ ಮೂಲಭೂತ ಸಮಸ್ಯೆಗಳಿಗೂ ಪರಿಹಾರ ಸಿಕ್ಕಿಲ್ಲ. ಈ ಅವಧಿಯಲ್ಲಿ ಅಧಿಕಾರ ನಡೆಸಿದ ಎಲ್ಲ ರಾಜಕೀಯ ಪಕ್ಷಗಳೂ ಇದಕ್ಕೆ ಹೊಣೆಗಾರರು ಎಂದು ರೈತ ನಾಯಕ ಕೆ.ಟಿ.ಗಂಗಾಧರ್ ಅಭಿಪ್ರಾಯಪಟ್ಟರು</p>.<p>*<br />ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದರೂ ಯಾವುದೇ ಮೂಲಭೂತ ಸಮಸ್ಯೆಗಳಿಗೂ ಪರಿಹಾರ ಸಿಕ್ಕಿಲ್ಲ. ಈ ಅವಧಿಯಲ್ಲಿ ಅಧಿಕಾರ ನಡೆಸಿದ ಎಲ್ಲ ರಾಜಕೀಯ ಪಕ್ಷಗಳೂ ಇದಕ್ಕೆ ಹೊಣೆಗಾರರು<br /><em><strong>–ಕೆ.ಟಿ.ಗಂಗಾಧರ್, ರೈತ ನಾಯಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>