ಬೆಂಗಳೂರು: ‘ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರನ್ನು ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಿರು
ವುದು ವಿವಾದವನ್ನು ಸೃಷ್ಟಿಸಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳಿಗಾಗಿ ಸದಾ ಹೋರಾಡುತ್ತಾ ಬಂದಿರುವ ಹಾಗೂ ಜಮ್ಮು ಮತ್ತು ಕಾಶ್ಮೀರದ ಜನತೆ ವಿಚಾರದಲ್ಲಿ ಬದ್ಧತೆ ಹೊಂದಿರುವ ಆಜಾದ್ ಅವರು ಈ ಪ್ರಶಸ್ತಿಯನ್ನು ತಿರಸ್ಕರಿಸುವುದನ್ನು ನಾನು ನಿರೀಕ್ಷಿಸುತ್ತೇನೆ’ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಚಂದ್ರಶೇಖರ್ ಹೇಳಿದ್ದಾರೆ.