<p><strong>ಬೆಂಗಳೂರು</strong>: ‘ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ಕೃಷಿ ತ್ಯಾಜ್ಯಗಳ ಮರುಬಳಕೆ, ದೇಸಿ ತಳಿಗಳ ಸಂರಕ್ಷಣೆ, ಭೌಗೋಳಿಕ ಮಾನ್ಯತೆ ಹೊಂದಿರುವ (ಜಿಐ ಟ್ಯಾಗ್) ಉತ್ಪನ್ನಗಳನ್ನು ಬಳಸುವಂತೆ ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. </p>.<p>ಕೃಷಿ ಇಲಾಖೆ ಆಯೋಜಿಸಿರುವ ‘ಉತ್ಪಾದನೋತ್ತರ ಕೃಷಿ ಹಾಗೂ ರೈತರ ಸಬಲೀಕರಣ’ ಎಂಬ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಬುಧವಾರ ಇಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಲು ಈಗಾಗಲೇ ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದ್ದು, ಅದರ ಮೂಲಕ ರೈತರ ಉತ್ಪನ್ನಗಳ ಸಂಸ್ಕರಣೆಗೆ ಆದ್ಯತೆ ನೀಡಲಾಗುತ್ತಿದೆ. ಈ ಬಗ್ಗೆ ಜರ್ಮನಿ, ಅಮೆರಿಕ, ವಿಯೆಟ್ನಾಂ, ಕಾಂಬೋಡಿಯಾ ಹಾಗೂ ನಮ್ಮ ದೇಶದ ವಿವಿಧ ರಾಜ್ಯಗಳಿಂದ ಬಂದಿರುವ ತಜ್ಞರು ಹಾಗೂ ರೈತರೊಂದಿಗೆ ಈ ಕುರಿತು ಚರ್ಚಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು. </p>.<p>‘ದೇಶದಲ್ಲಿ ಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಉತ್ಪಾದನೋತ್ತರ ಕೃಷಿ ಹಾಗೂ ರೈತರ ಸಬಲೀಕರಣ ಎಂಬ ಧ್ಯೇಯ ವಾಕ್ಯದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನವನ್ನು ಫೆ. 6ರಿಂದ 8ರವರೆಗೆ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ಮೇಳವು ಮುಖ್ಯವಾಗಿ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಕೃಷಿ ಪರಿಸರ ವಿಜ್ಞಾನ ಹಾಗೂ ಬ್ರ್ಯಾಂಡಿಂಗ್ಗೆ ಆದ್ಯತೆ ನೀಡಲಿದೆ’ ಎಂದು ವಿವರಿಸಿದರು. </p>.<p>ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಮೊಹಮ್ಮದ ಪರವೇಜ ಬಂತನಾಳ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ಕೃಷಿ ತ್ಯಾಜ್ಯಗಳ ಮರುಬಳಕೆ, ದೇಸಿ ತಳಿಗಳ ಸಂರಕ್ಷಣೆ, ಭೌಗೋಳಿಕ ಮಾನ್ಯತೆ ಹೊಂದಿರುವ (ಜಿಐ ಟ್ಯಾಗ್) ಉತ್ಪನ್ನಗಳನ್ನು ಬಳಸುವಂತೆ ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. </p>.<p>ಕೃಷಿ ಇಲಾಖೆ ಆಯೋಜಿಸಿರುವ ‘ಉತ್ಪಾದನೋತ್ತರ ಕೃಷಿ ಹಾಗೂ ರೈತರ ಸಬಲೀಕರಣ’ ಎಂಬ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಬುಧವಾರ ಇಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಲು ಈಗಾಗಲೇ ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದ್ದು, ಅದರ ಮೂಲಕ ರೈತರ ಉತ್ಪನ್ನಗಳ ಸಂಸ್ಕರಣೆಗೆ ಆದ್ಯತೆ ನೀಡಲಾಗುತ್ತಿದೆ. ಈ ಬಗ್ಗೆ ಜರ್ಮನಿ, ಅಮೆರಿಕ, ವಿಯೆಟ್ನಾಂ, ಕಾಂಬೋಡಿಯಾ ಹಾಗೂ ನಮ್ಮ ದೇಶದ ವಿವಿಧ ರಾಜ್ಯಗಳಿಂದ ಬಂದಿರುವ ತಜ್ಞರು ಹಾಗೂ ರೈತರೊಂದಿಗೆ ಈ ಕುರಿತು ಚರ್ಚಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು. </p>.<p>‘ದೇಶದಲ್ಲಿ ಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಉತ್ಪಾದನೋತ್ತರ ಕೃಷಿ ಹಾಗೂ ರೈತರ ಸಬಲೀಕರಣ ಎಂಬ ಧ್ಯೇಯ ವಾಕ್ಯದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನವನ್ನು ಫೆ. 6ರಿಂದ 8ರವರೆಗೆ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ಮೇಳವು ಮುಖ್ಯವಾಗಿ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಕೃಷಿ ಪರಿಸರ ವಿಜ್ಞಾನ ಹಾಗೂ ಬ್ರ್ಯಾಂಡಿಂಗ್ಗೆ ಆದ್ಯತೆ ನೀಡಲಿದೆ’ ಎಂದು ವಿವರಿಸಿದರು. </p>.<p>ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಮೊಹಮ್ಮದ ಪರವೇಜ ಬಂತನಾಳ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>