<p><strong>ಬೆಂಗಳೂರು:</strong> ಮನೆ ತೊರೆದು ಬಂದಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ಯುತ್ತಿದ್ದ ಇಬ್ಬರು ಯುವಕರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದು, ಅಪಾಯಕ್ಕೆ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಿದ್ದಾರೆ.</p>.<p>ಮೈಸೂರಿನ ಬಾಲಕಿ ಪೋಷಕರ ಜೊತೆ ಜಗಳ ಮಾಡಿಕೊಂಡು ರೈಲಿನಲ್ಲಿ ನಗರಕ್ಕೆ ಬಂದಿದ್ದಳು. ಶುಕ್ರವಾರ ರಾತ್ರಿ 11.45ರ ಸುಮಾರಿಗೆ ಕ್ವೀನ್ಸ್ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಆಕೆಯನ್ನು ಮಾತನಾಡಿಸಿದ್ದ ಯುವಕರಿಬ್ಬರು ಹಣ ಕೊಡುವುದಾಗಿ ಹೇಳಿ ತಮ್ಮೊಂದಿಗೆ ಕರೆದೊಯ್ಯುತ್ತಿದ್ದರು.</p>.<p>ಅನುಮಾನಗೊಂಡ ಸಾರ್ವಜನಿಕರೊಬ್ಬರು ಹೈಗ್ರೌಂಡ್ಸ್ ಠಾಣೆಗೆ ವಿಷಯ ತಿಳಿಸಿದ್ದರು. ಗಸ್ತಿನಲ್ಲಿದ್ದ ಎಸ್.ಆರ್.ಅರಿಬೆಂಚಿ, ಜ್ಯೋತಿಬಾಯಿ ಹಾಗೂ ಚಂದ್ರಕಲಾ ಅವರು ಹೊಯ್ಸಳ ವಾಹನದಲ್ಲಿ ಸ್ಥಳಕ್ಕೆ ತೆರಳಿದ್ದರು. ಬಾಲಕಿಯನ್ನು ರಕ್ಷಿಸಿ, ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಸದ್ಯ ಬಾಲಕಿ ಬಾಲಮಂದಿರದಲ್ಲಿದ್ದಾಳೆ. ಆಕೆ ಪೋಷಕರಿಗೂ ಮಾಹಿತಿ ನೀಡಲಾಗಿದೆ.</p>.<p>ಬಾಲಕಿಯನ್ನು ರಕ್ಷಿಸಿದ ಸಿಬ್ಬಂದಿಯ ಕೆಲಸಕ್ಕೆ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಂಸಾ ಪತ್ರ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮನೆ ತೊರೆದು ಬಂದಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ಯುತ್ತಿದ್ದ ಇಬ್ಬರು ಯುವಕರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದು, ಅಪಾಯಕ್ಕೆ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಿದ್ದಾರೆ.</p>.<p>ಮೈಸೂರಿನ ಬಾಲಕಿ ಪೋಷಕರ ಜೊತೆ ಜಗಳ ಮಾಡಿಕೊಂಡು ರೈಲಿನಲ್ಲಿ ನಗರಕ್ಕೆ ಬಂದಿದ್ದಳು. ಶುಕ್ರವಾರ ರಾತ್ರಿ 11.45ರ ಸುಮಾರಿಗೆ ಕ್ವೀನ್ಸ್ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಆಕೆಯನ್ನು ಮಾತನಾಡಿಸಿದ್ದ ಯುವಕರಿಬ್ಬರು ಹಣ ಕೊಡುವುದಾಗಿ ಹೇಳಿ ತಮ್ಮೊಂದಿಗೆ ಕರೆದೊಯ್ಯುತ್ತಿದ್ದರು.</p>.<p>ಅನುಮಾನಗೊಂಡ ಸಾರ್ವಜನಿಕರೊಬ್ಬರು ಹೈಗ್ರೌಂಡ್ಸ್ ಠಾಣೆಗೆ ವಿಷಯ ತಿಳಿಸಿದ್ದರು. ಗಸ್ತಿನಲ್ಲಿದ್ದ ಎಸ್.ಆರ್.ಅರಿಬೆಂಚಿ, ಜ್ಯೋತಿಬಾಯಿ ಹಾಗೂ ಚಂದ್ರಕಲಾ ಅವರು ಹೊಯ್ಸಳ ವಾಹನದಲ್ಲಿ ಸ್ಥಳಕ್ಕೆ ತೆರಳಿದ್ದರು. ಬಾಲಕಿಯನ್ನು ರಕ್ಷಿಸಿ, ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಸದ್ಯ ಬಾಲಕಿ ಬಾಲಮಂದಿರದಲ್ಲಿದ್ದಾಳೆ. ಆಕೆ ಪೋಷಕರಿಗೂ ಮಾಹಿತಿ ನೀಡಲಾಗಿದೆ.</p>.<p>ಬಾಲಕಿಯನ್ನು ರಕ್ಷಿಸಿದ ಸಿಬ್ಬಂದಿಯ ಕೆಲಸಕ್ಕೆ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಂಸಾ ಪತ್ರ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>