ಅನುಮಾನಗೊಂಡ ಸಾರ್ವಜನಿಕರೊಬ್ಬರು ಹೈಗ್ರೌಂಡ್ಸ್ ಠಾಣೆಗೆ ವಿಷಯ ತಿಳಿಸಿದ್ದರು. ಗಸ್ತಿನಲ್ಲಿದ್ದ ಎಸ್.ಆರ್.ಅರಿಬೆಂಚಿ, ಜ್ಯೋತಿಬಾಯಿ ಹಾಗೂ ಚಂದ್ರಕಲಾ ಅವರು ಹೊಯ್ಸಳ ವಾಹನದಲ್ಲಿ ಸ್ಥಳಕ್ಕೆ ತೆರಳಿದ್ದರು. ಬಾಲಕಿಯನ್ನು ರಕ್ಷಿಸಿ, ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಸದ್ಯ ಬಾಲಕಿ ಬಾಲಮಂದಿರದಲ್ಲಿದ್ದಾಳೆ. ಆಕೆ ಪೋಷಕರಿಗೂ ಮಾಹಿತಿ ನೀಡಲಾಗಿದೆ.