<p><strong>ಬೆಂಗಳೂರು: </strong>ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಿಂದ ಸೆ. 18ರಂದು ಅಪಹರಣವಾಗಿದ್ದ ಐದು ವರ್ಷದ ಬಾಲಕಿಯನ್ನು ತಮಿಳುನಾಡಿನ ಕನ್ಯಾಕುಮಾರಿ ಪೊಲೀಸರು ರಕ್ಷಿಸಿದ್ದು, ಆಕೆಯನ್ನು ಅಪಹರಣ ಮಾಡಿದ್ದ ದಂಪತಿಯನ್ನು ಬಂಧಿಸಿ ನಗರದ ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>‘ಸತ್ಯಮೂರ್ತಿ ಮತ್ತು ಕಾರ್ತಿಕೇಶ್ವರಿ ದಂಪತಿ ಪುತ್ರಿ ಲೋಕಿತಾಳನ್ನು ಆರೋಪಿಗಳು ಅಪಹರಿಸಿದ್ದರು. ಈ ಸಂಬಂಧ ಬಾಲಕಿಯ ಅಜ್ಜ ವಿಜಯಕುಮಾರ್ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಾಲಕಿಯನ್ನು ಪೋಷಕರ ಸುಪರ್ದಿಗೆ ನೀಡಲಾಗಿದೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಿಂದ ಸೆ. 18ರಂದು ಅಪಹರಣವಾಗಿದ್ದ ಐದು ವರ್ಷದ ಬಾಲಕಿಯನ್ನು ತಮಿಳುನಾಡಿನ ಕನ್ಯಾಕುಮಾರಿ ಪೊಲೀಸರು ರಕ್ಷಿಸಿದ್ದು, ಆಕೆಯನ್ನು ಅಪಹರಣ ಮಾಡಿದ್ದ ದಂಪತಿಯನ್ನು ಬಂಧಿಸಿ ನಗರದ ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>‘ಸತ್ಯಮೂರ್ತಿ ಮತ್ತು ಕಾರ್ತಿಕೇಶ್ವರಿ ದಂಪತಿ ಪುತ್ರಿ ಲೋಕಿತಾಳನ್ನು ಆರೋಪಿಗಳು ಅಪಹರಿಸಿದ್ದರು. ಈ ಸಂಬಂಧ ಬಾಲಕಿಯ ಅಜ್ಜ ವಿಜಯಕುಮಾರ್ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಾಲಕಿಯನ್ನು ಪೋಷಕರ ಸುಪರ್ದಿಗೆ ನೀಡಲಾಗಿದೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>