<p><strong>ಬೆಂಗಳೂರು:</strong> ರಾಜರಾಜೇಶ್ವರಿ ನಗರದಲ್ಲಿರುವ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯು ರಜತ ಮಹೋತ್ಸವವನ್ನು ಭಾನುವಾರ ಅದ್ದೂರಿಯಾ ಆಚರಿಸಿತು.</p><p>ತಿರುಚಿ ಮಹಾಸ್ವಾಮೀಜಿಯವರ ಪರಮಾನು ಗ್ರಹದಿಂದ ಪ್ರಾರಂಭವಾದ ಈ ಶಾಲೆಯು ಭಾರತೀಯ ಸಂಸ್ಕೃತಿ ಮತ್ತು ಸನಾತನ ಧರ್ಮದ ಮೌಲ್ಯಧಾರಿತ ಶಿಕ್ಷಣವನ್ನು ಯಾವುದೇ ರೀತಿಯ ಭೇದಭಾವವಿಲ್ಲದೆ ಸರ್ವರಿಗೂ ಶಿಕ್ಷಣ ಎಂಬ ಧ್ಯೇಯದೊಂದಿಗೆ ನೀಡುತ್ತ ಬಂದಿದೆ ಎಂದು ಸಮಾರಂಭದಲ್ಲಿದ್ದ ಎಲ್ಲಾ ಗಣ್ಯರು ಸಂವಾದ ಕಾರ್ಯಕ್ರಮದ ಮೂಲಕ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದರು.</p><p>ಕರ್ನಾಟಕ ರಾಜ್ಯದ ಮಹಿಳಾ ಅಯೋಗ್ಯದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿಯವರು ಮಕ್ಕಳು ತಾವು ಅಂದುಕೊಂಡಿದ್ದನ್ನು ಸಾಧಿಸಲು ಶ್ರದ್ಧೆ ಮತ್ತು ಶ್ರಮ ವಹಿಸಬೇಕು. ಹೆಣ್ಣು ಮಕ್ಕಳು ರಾಜಕೀಯಕ್ಕೆ ಬರಬೇಕು ಇಲ್ಲದಿದ್ದರೂ ರಾಜಕೀಯವನ್ನು ಚೆನ್ನಾಗಿ ಅರಿಯಬೇಕು ಎಂದು ಹೇಳಿದರು.</p><p>ಇಸ್ರೋ ಉಪನಿರ್ದೇಶಕ ಡಾ. ವೆಂಕಟೇಶ್ವರ ಶರ್ಮರವರು ವಿಜ್ಞಾನ ಮತ್ತು ಆಧ್ಯಾತ್ಮ ಎರಡು ಜೊತೆ ಜೊತೆಯಲ್ಲಿ ಸಾಗಬೇಕು ವಿದ್ಯಾರ್ಥಿಗಳ ಕೈಯಲ್ಲಿ ಒಂದು ಮಿನಿ ಸ್ಯಾಟಲೈಟ್ ಮಾಡಿಸುವಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.</p><p>ಲೇಖಕ ಶಾಂತನು ಗುಪ್ತ ಅವರು ಮಾತನಾಡುತ್ತಾ ನಮ್ಮ ಜೀವನದಲ್ಲಿ ಏನಾದರೂ ಕಷ್ಟಗಳು ಬಂದಾಗ ಶ್ರೀರಾಮನ ಜೀವನವನ್ನು ನೆನಪಿಸಿಕೊಳ್ಳಿ ಕಷ್ಟಗಳನ್ನು ಸಹಿಸುವ ಶಕ್ತಿ ಬರುತ್ತದೆ ಎಂದರು.</p><p>ಶ್ರೀ ಸ್ವಾಮಿ ನಿರ್ಭಯಾನಂದ ಸರಸ್ವತಿ ಸ್ವಾಮೀಜಿಯವರು ಮಾತನಾಡುತ್ತಾ ತಮ್ಮ ಆತ್ಮ ಬಲವನ್ನು ಹೆಚ್ಚಿಸಿಕೊಳ್ಳುವ ಮುನ್ನ ದೈಹಿಕ ಬಲ, ಬುದ್ಧಿಬಲ ಹಾಗೂ ಭಾವನಾತ್ಮಕ ಬಲವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.</p><p>ಹರಿಹರ ಪುರ ಮಹಾಸ್ವಾಮೀಜಿಯವರು ತಂತ್ರಜ್ಞಾನವು ನಮ್ಮ ಲೌಕಿಕ ಸವಲತ್ತುಗಳಿಗೆ ಅನುಕೂಲ ಮಾಡಿಕೊಡಬಹುದೇ ಹೊರತು ಆತ್ಮ ಶಕ್ತಿ ಜಾಗೃತಿಗಲ್ಲ. ಆದ್ದರಿಂದ ನಮ್ಮ ಆಚಾರ ವಿಚಾರಗಳ ಬಗ್ಗೆ ಎಂದೂ ಉದಾಸೀನ ಮಾಡಬೇಡಿ ಎಂದರು.</p><p>ಜಯೇಂದ್ರ ಪುರಿ ಮಹಾ ಸ್ವಾಮೀಜಿಯವರು ಮಾತನಾಡುತ್ತಾ ನಾವು ಕಲಿಯುವ ವಿದ್ಯೆ ಸಮಾಜದ ಒಳಿತಿಗಾಗಿ ಇರಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಪ್ರತಿದಿನ ಒಂದು ಗಂಟೆಯನ್ನು ಮೀಸಲಿಡಬೇಕು ಎಂದು ಜಾಗೃತಿ ಮೂಡಿಸಿದರು.</p><p>ಶಾಲೆಯ ಗೌರವ ಕಾರ್ಯದರ್ಶಿಗಳಾದ ಶ್ರೀ ಹಯಗ್ರೀವ ಆಚಾರ್ಯ ಅವರಿಗೆ ಎಲ್ಲಾ ಗುರು ಹಿರಿಯರ ಸಮ್ಮುಖದಲ್ಲಿ ಸರ್ವಸಂತ ಪ್ರಿಯ ಸೇವಾ ಸೇನಾಧಿಪತಿ ಎಂಬ ಬಿರುದನ್ನು ನೀಡಿ ಗೌರವಿಸಿದರು.</p>.<p>ಸುಮಾರು 7000ಕ್ಕೂ ಹೆಚ್ಚು ಪೋಷಕರು ಭಾಗವಹಿಸಿದ ಈ ಬೃಹತ್ ಕಾರ್ಯಕ್ರಮದಲ್ಲಿ ಸೃಷ್ಟಿಯ ಮೂಲದಿಂದ ಆಧುನಿಕ ಭಾರತದವರೆಗೆ ಸನಾತನ ಕಥೆಗಳನ್ನು ಒಳಗೊಂಡ ಆದಿ ಅನಂತ ಮಾಯೆ ಎಂಬ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಕಣ್ಮನ ಸೆಳೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜರಾಜೇಶ್ವರಿ ನಗರದಲ್ಲಿರುವ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯು ರಜತ ಮಹೋತ್ಸವವನ್ನು ಭಾನುವಾರ ಅದ್ದೂರಿಯಾ ಆಚರಿಸಿತು.</p><p>ತಿರುಚಿ ಮಹಾಸ್ವಾಮೀಜಿಯವರ ಪರಮಾನು ಗ್ರಹದಿಂದ ಪ್ರಾರಂಭವಾದ ಈ ಶಾಲೆಯು ಭಾರತೀಯ ಸಂಸ್ಕೃತಿ ಮತ್ತು ಸನಾತನ ಧರ್ಮದ ಮೌಲ್ಯಧಾರಿತ ಶಿಕ್ಷಣವನ್ನು ಯಾವುದೇ ರೀತಿಯ ಭೇದಭಾವವಿಲ್ಲದೆ ಸರ್ವರಿಗೂ ಶಿಕ್ಷಣ ಎಂಬ ಧ್ಯೇಯದೊಂದಿಗೆ ನೀಡುತ್ತ ಬಂದಿದೆ ಎಂದು ಸಮಾರಂಭದಲ್ಲಿದ್ದ ಎಲ್ಲಾ ಗಣ್ಯರು ಸಂವಾದ ಕಾರ್ಯಕ್ರಮದ ಮೂಲಕ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದರು.</p><p>ಕರ್ನಾಟಕ ರಾಜ್ಯದ ಮಹಿಳಾ ಅಯೋಗ್ಯದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿಯವರು ಮಕ್ಕಳು ತಾವು ಅಂದುಕೊಂಡಿದ್ದನ್ನು ಸಾಧಿಸಲು ಶ್ರದ್ಧೆ ಮತ್ತು ಶ್ರಮ ವಹಿಸಬೇಕು. ಹೆಣ್ಣು ಮಕ್ಕಳು ರಾಜಕೀಯಕ್ಕೆ ಬರಬೇಕು ಇಲ್ಲದಿದ್ದರೂ ರಾಜಕೀಯವನ್ನು ಚೆನ್ನಾಗಿ ಅರಿಯಬೇಕು ಎಂದು ಹೇಳಿದರು.</p><p>ಇಸ್ರೋ ಉಪನಿರ್ದೇಶಕ ಡಾ. ವೆಂಕಟೇಶ್ವರ ಶರ್ಮರವರು ವಿಜ್ಞಾನ ಮತ್ತು ಆಧ್ಯಾತ್ಮ ಎರಡು ಜೊತೆ ಜೊತೆಯಲ್ಲಿ ಸಾಗಬೇಕು ವಿದ್ಯಾರ್ಥಿಗಳ ಕೈಯಲ್ಲಿ ಒಂದು ಮಿನಿ ಸ್ಯಾಟಲೈಟ್ ಮಾಡಿಸುವಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.</p><p>ಲೇಖಕ ಶಾಂತನು ಗುಪ್ತ ಅವರು ಮಾತನಾಡುತ್ತಾ ನಮ್ಮ ಜೀವನದಲ್ಲಿ ಏನಾದರೂ ಕಷ್ಟಗಳು ಬಂದಾಗ ಶ್ರೀರಾಮನ ಜೀವನವನ್ನು ನೆನಪಿಸಿಕೊಳ್ಳಿ ಕಷ್ಟಗಳನ್ನು ಸಹಿಸುವ ಶಕ್ತಿ ಬರುತ್ತದೆ ಎಂದರು.</p><p>ಶ್ರೀ ಸ್ವಾಮಿ ನಿರ್ಭಯಾನಂದ ಸರಸ್ವತಿ ಸ್ವಾಮೀಜಿಯವರು ಮಾತನಾಡುತ್ತಾ ತಮ್ಮ ಆತ್ಮ ಬಲವನ್ನು ಹೆಚ್ಚಿಸಿಕೊಳ್ಳುವ ಮುನ್ನ ದೈಹಿಕ ಬಲ, ಬುದ್ಧಿಬಲ ಹಾಗೂ ಭಾವನಾತ್ಮಕ ಬಲವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.</p><p>ಹರಿಹರ ಪುರ ಮಹಾಸ್ವಾಮೀಜಿಯವರು ತಂತ್ರಜ್ಞಾನವು ನಮ್ಮ ಲೌಕಿಕ ಸವಲತ್ತುಗಳಿಗೆ ಅನುಕೂಲ ಮಾಡಿಕೊಡಬಹುದೇ ಹೊರತು ಆತ್ಮ ಶಕ್ತಿ ಜಾಗೃತಿಗಲ್ಲ. ಆದ್ದರಿಂದ ನಮ್ಮ ಆಚಾರ ವಿಚಾರಗಳ ಬಗ್ಗೆ ಎಂದೂ ಉದಾಸೀನ ಮಾಡಬೇಡಿ ಎಂದರು.</p><p>ಜಯೇಂದ್ರ ಪುರಿ ಮಹಾ ಸ್ವಾಮೀಜಿಯವರು ಮಾತನಾಡುತ್ತಾ ನಾವು ಕಲಿಯುವ ವಿದ್ಯೆ ಸಮಾಜದ ಒಳಿತಿಗಾಗಿ ಇರಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಪ್ರತಿದಿನ ಒಂದು ಗಂಟೆಯನ್ನು ಮೀಸಲಿಡಬೇಕು ಎಂದು ಜಾಗೃತಿ ಮೂಡಿಸಿದರು.</p><p>ಶಾಲೆಯ ಗೌರವ ಕಾರ್ಯದರ್ಶಿಗಳಾದ ಶ್ರೀ ಹಯಗ್ರೀವ ಆಚಾರ್ಯ ಅವರಿಗೆ ಎಲ್ಲಾ ಗುರು ಹಿರಿಯರ ಸಮ್ಮುಖದಲ್ಲಿ ಸರ್ವಸಂತ ಪ್ರಿಯ ಸೇವಾ ಸೇನಾಧಿಪತಿ ಎಂಬ ಬಿರುದನ್ನು ನೀಡಿ ಗೌರವಿಸಿದರು.</p>.<p>ಸುಮಾರು 7000ಕ್ಕೂ ಹೆಚ್ಚು ಪೋಷಕರು ಭಾಗವಹಿಸಿದ ಈ ಬೃಹತ್ ಕಾರ್ಯಕ್ರಮದಲ್ಲಿ ಸೃಷ್ಟಿಯ ಮೂಲದಿಂದ ಆಧುನಿಕ ಭಾರತದವರೆಗೆ ಸನಾತನ ಕಥೆಗಳನ್ನು ಒಳಗೊಂಡ ಆದಿ ಅನಂತ ಮಾಯೆ ಎಂಬ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಕಣ್ಮನ ಸೆಳೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>