<p><strong>ಬೆಂಗಳೂರು:</strong> ‘ಕೋವಿಡ್ನಿಂದ ನಷ್ಟಕ್ಕೆ ಸಿಲುಕಿರುವ ಹಾಪ್ಕಾಮ್ಸ್ಗೆ ಸರ್ಕಾರ ಈ ಬಜೆಟ್ನಲ್ಲಿ ₹25 ಕೋಟಿ ಆರ್ಥಿಕ ನೆರವು ಘೋಷಿಸಬೇಕು’ ಎಂದು ಬೆಂಗಳೂರು ಹಾಪ್ಕಾಮ್ಸ್ ಅಧ್ಯಕ್ಷ ಎನ್.ದೇವರಾಜ್ ಮನವಿ ಮಾಡಿದರು.</p>.<p>ಹಾಪ್ಕಾಮ್ಸ್ ವತಿಯಿಂದ ಗಣರಾಜ್ಯೋತ್ಸವ ದಿನದ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಸಂಸ್ಥೆಯ ಮಾರಾಟಗಾರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೋವಿಡ್ ಜೊತೆಗೆ ಇತ್ತೀಚಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳ ಪೈಪೋಟಿ, ಹಣ್ಣು–ತರಕಾರಿ ಸರಬರಾಜು ಕುಂಠಿತ ಸೇರಿದಂತೆ ಹಲವು ಕಾರಣದಿಂದ ಹಾಪ್ಕಾಮ್ಸ್ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ’ ಎಂದರು.</p>.<p>‘ಸರ್ಕಾರ ಹಾಲಿಗೆ ನೀಡುವಂತೆ ಹಾಪ್ಕಾಮ್ಸ್ನ ತರಕಾರಿಗಳಿಗೂ ಬೆಂಬಲ ಬೆಲೆ ನೀಡಿದರೆ, ಉತ್ಪನ್ನಗಳನ್ನು ಇನ್ನೂ ಕಡಿಮೆ ದರದಲ್ಲಿ ಗ್ರಾಹಕರಿಗೆ ನೀಡಬಹುದು. ಇದರಿಂದ ಸಂಸ್ಥೆಯೂ ಅಭಿವೃದ್ಧಿ ಹೊಂದುತ್ತದೆ’ ಎಂದು ಹೇಳಿದರು.</p>.<p>‘ಹಾಪ್ಕಾಮ್ಸ್ನ ನಿವೃತ್ತ ನೌಕರರಿಗೆ ಆರ್ಥಿಕ ಸೌಲಭ್ಯಗಳನ್ನು ಒದಗಿಸಲು ಪ್ರತ್ಯೇಕ ನಿಧಿ ಇಲ್ಲ. ನಿವೃತ್ತ ನೌಕರರ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ 120 ನಿವೃತ್ತ ನೌಕರರಿಗೆ ₹3.5 ಕೋಟಿ ಪಾವತಿಸಬೇಕಾಗಿದೆ.ಬಜೆಟ್ನಲ್ಲಿ ಆರ್ಥಿಕ ನೆರವು ನೀಡುವ ಮೂಲಕ ಹಾಪ್ಕಾಮ್ಸ್ ಅನ್ನು ಉಳಿಸಬೇಕಾಗಿದೆ’ ಎಂದು ಮನವಿ ಮಾಡಿದರು.</p>.<p>ಹಾಪ್ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಉಮೇಶ್ ಎಸ್.ಮಿರ್ಜಿ,‘ಸಂಸ್ಥೆಯ ವ್ಯಾಪಾರಾಭಿವೃದ್ಧಿಗೆ ಕಾರಣರಾದ 20 ಮಾರಾಟಗಾರರನ್ನು ಗುರುತಿಸಿ, ಅವರನ್ನು ಸನ್ಮಾನಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಇವರು ತಮ್ಮ ಮಳಿಗೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ವ್ಯಾಪಾರ ವೃದ್ಧಿಸಿದ್ದಾರೆ’ ಎಂದರು.</p>.<p>ಸಂಸ್ಥೆಯ ನಿರ್ದೇಶಕರಾದ ಎ.ಎಸ್.ಚಂದ್ರೇಗೌಡ, ನಾರಾಯಣಪ್ಪ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೋವಿಡ್ನಿಂದ ನಷ್ಟಕ್ಕೆ ಸಿಲುಕಿರುವ ಹಾಪ್ಕಾಮ್ಸ್ಗೆ ಸರ್ಕಾರ ಈ ಬಜೆಟ್ನಲ್ಲಿ ₹25 ಕೋಟಿ ಆರ್ಥಿಕ ನೆರವು ಘೋಷಿಸಬೇಕು’ ಎಂದು ಬೆಂಗಳೂರು ಹಾಪ್ಕಾಮ್ಸ್ ಅಧ್ಯಕ್ಷ ಎನ್.ದೇವರಾಜ್ ಮನವಿ ಮಾಡಿದರು.</p>.<p>ಹಾಪ್ಕಾಮ್ಸ್ ವತಿಯಿಂದ ಗಣರಾಜ್ಯೋತ್ಸವ ದಿನದ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಸಂಸ್ಥೆಯ ಮಾರಾಟಗಾರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೋವಿಡ್ ಜೊತೆಗೆ ಇತ್ತೀಚಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳ ಪೈಪೋಟಿ, ಹಣ್ಣು–ತರಕಾರಿ ಸರಬರಾಜು ಕುಂಠಿತ ಸೇರಿದಂತೆ ಹಲವು ಕಾರಣದಿಂದ ಹಾಪ್ಕಾಮ್ಸ್ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ’ ಎಂದರು.</p>.<p>‘ಸರ್ಕಾರ ಹಾಲಿಗೆ ನೀಡುವಂತೆ ಹಾಪ್ಕಾಮ್ಸ್ನ ತರಕಾರಿಗಳಿಗೂ ಬೆಂಬಲ ಬೆಲೆ ನೀಡಿದರೆ, ಉತ್ಪನ್ನಗಳನ್ನು ಇನ್ನೂ ಕಡಿಮೆ ದರದಲ್ಲಿ ಗ್ರಾಹಕರಿಗೆ ನೀಡಬಹುದು. ಇದರಿಂದ ಸಂಸ್ಥೆಯೂ ಅಭಿವೃದ್ಧಿ ಹೊಂದುತ್ತದೆ’ ಎಂದು ಹೇಳಿದರು.</p>.<p>‘ಹಾಪ್ಕಾಮ್ಸ್ನ ನಿವೃತ್ತ ನೌಕರರಿಗೆ ಆರ್ಥಿಕ ಸೌಲಭ್ಯಗಳನ್ನು ಒದಗಿಸಲು ಪ್ರತ್ಯೇಕ ನಿಧಿ ಇಲ್ಲ. ನಿವೃತ್ತ ನೌಕರರ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ 120 ನಿವೃತ್ತ ನೌಕರರಿಗೆ ₹3.5 ಕೋಟಿ ಪಾವತಿಸಬೇಕಾಗಿದೆ.ಬಜೆಟ್ನಲ್ಲಿ ಆರ್ಥಿಕ ನೆರವು ನೀಡುವ ಮೂಲಕ ಹಾಪ್ಕಾಮ್ಸ್ ಅನ್ನು ಉಳಿಸಬೇಕಾಗಿದೆ’ ಎಂದು ಮನವಿ ಮಾಡಿದರು.</p>.<p>ಹಾಪ್ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಉಮೇಶ್ ಎಸ್.ಮಿರ್ಜಿ,‘ಸಂಸ್ಥೆಯ ವ್ಯಾಪಾರಾಭಿವೃದ್ಧಿಗೆ ಕಾರಣರಾದ 20 ಮಾರಾಟಗಾರರನ್ನು ಗುರುತಿಸಿ, ಅವರನ್ನು ಸನ್ಮಾನಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಇವರು ತಮ್ಮ ಮಳಿಗೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ವ್ಯಾಪಾರ ವೃದ್ಧಿಸಿದ್ದಾರೆ’ ಎಂದರು.</p>.<p>ಸಂಸ್ಥೆಯ ನಿರ್ದೇಶಕರಾದ ಎ.ಎಸ್.ಚಂದ್ರೇಗೌಡ, ನಾರಾಯಣಪ್ಪ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>