<p><strong>ರಾಜರಾಜೇಶ್ವರಿನಗರ:</strong> ‘ನಿಜವಾದ ಫಲಾನುಭವಿಗಳಿಗೆ, ಜಮೀನು ಇಲ್ಲದವರಿಗೆ ಸಾಗುವಳಿ ಚೀಟಿ, ಖಾತೆ ನೀಡಬೇಕು. ಅವರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸಬಾರದು‘ ಎಂದು ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು.</p>.<p>ಮಾಗಡಿ ಮುಖ್ಯರಸ್ತೆಯ ಮಾರೇನಹಳ್ಳಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಒಂದು ಗುಂಟೆ ಜಮೀನು ಇಲ್ಲ’, ‘ಸಾಗುವಳಿ ಮಾಡುತ್ತಿರುವ ನಮಗೆ ಸಾಗುವಳಿ ಚೀಟಿ ಕೊಡಿಸಿ’, ‘ಪಹಣಿ ತಿದ್ದುಪಡಿ ಆಗುತ್ತಿಲ್ಲ’ ‘ಜಲಜೀವನ್ ಅವಾಂತರ ಉಂಟು ಮಾಡಿದೆ’ ಹೀಗೆ ವಿವಿಧ ಸಮಸ್ಯೆಗಳನ್ನು ಅನೇಕರು ಶಾಸಕರ ಮುಂದಿಟ್ಟರು.</p>.<p>ಚೋಳನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಆನಂದಸ್ವಾಮಿ ಅವರು, ‘ಅನಾದಿಕಾಲದಲ್ಲಿ ನಿಗದಿಯಾಗಿರುವ ಠಾಣಾಗಡಿ ವಿಸ್ತರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು, ಪ್ರತಿ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗವನ್ನು ಕಾಯ್ದಿರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಶಾಲಾ ಮಕ್ಕಳಿಗೆ ಕ್ರೀಡಾ ಸಾಮಾಗ್ರಿ ರೈತರಿಗೆ ನೀರು ಸಿಂಪಡಣೆ ಸಾಧನ, ಕಳೆ ತೆಗೆಯುವ ಯಂತ್ರ, ಮೇವಿನ ಬೀಜ, ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.</p>.<p>ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಎಚ್. ಶ್ರೀನಿವಾಸ್, ಒಕ್ಕಲಿಗರ ಸಂಘದ ಗೌರವ ಅಧ್ಯಕ್ಷ ಡಿ. ಹನುಮಂತಯ್ಯ, ಉಪ ತಹಶೀಲ್ದಾರ್ ಕೆಂಪೇಗೌಡ, ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಇ.ಒ. ಬಿಂದು, ಕಾಂಗ್ರೆಸ್ ಮುಖಂಡ ಎಸ್.ಟಿ. ಕುಬೇರಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ‘ನಿಜವಾದ ಫಲಾನುಭವಿಗಳಿಗೆ, ಜಮೀನು ಇಲ್ಲದವರಿಗೆ ಸಾಗುವಳಿ ಚೀಟಿ, ಖಾತೆ ನೀಡಬೇಕು. ಅವರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸಬಾರದು‘ ಎಂದು ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು.</p>.<p>ಮಾಗಡಿ ಮುಖ್ಯರಸ್ತೆಯ ಮಾರೇನಹಳ್ಳಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಒಂದು ಗುಂಟೆ ಜಮೀನು ಇಲ್ಲ’, ‘ಸಾಗುವಳಿ ಮಾಡುತ್ತಿರುವ ನಮಗೆ ಸಾಗುವಳಿ ಚೀಟಿ ಕೊಡಿಸಿ’, ‘ಪಹಣಿ ತಿದ್ದುಪಡಿ ಆಗುತ್ತಿಲ್ಲ’ ‘ಜಲಜೀವನ್ ಅವಾಂತರ ಉಂಟು ಮಾಡಿದೆ’ ಹೀಗೆ ವಿವಿಧ ಸಮಸ್ಯೆಗಳನ್ನು ಅನೇಕರು ಶಾಸಕರ ಮುಂದಿಟ್ಟರು.</p>.<p>ಚೋಳನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಆನಂದಸ್ವಾಮಿ ಅವರು, ‘ಅನಾದಿಕಾಲದಲ್ಲಿ ನಿಗದಿಯಾಗಿರುವ ಠಾಣಾಗಡಿ ವಿಸ್ತರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು, ಪ್ರತಿ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗವನ್ನು ಕಾಯ್ದಿರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಶಾಲಾ ಮಕ್ಕಳಿಗೆ ಕ್ರೀಡಾ ಸಾಮಾಗ್ರಿ ರೈತರಿಗೆ ನೀರು ಸಿಂಪಡಣೆ ಸಾಧನ, ಕಳೆ ತೆಗೆಯುವ ಯಂತ್ರ, ಮೇವಿನ ಬೀಜ, ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.</p>.<p>ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಎಚ್. ಶ್ರೀನಿವಾಸ್, ಒಕ್ಕಲಿಗರ ಸಂಘದ ಗೌರವ ಅಧ್ಯಕ್ಷ ಡಿ. ಹನುಮಂತಯ್ಯ, ಉಪ ತಹಶೀಲ್ದಾರ್ ಕೆಂಪೇಗೌಡ, ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಇ.ಒ. ಬಿಂದು, ಕಾಂಗ್ರೆಸ್ ಮುಖಂಡ ಎಸ್.ಟಿ. ಕುಬೇರಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>